ಬೈಕಿನಿಂದ ಆಯತಪ್ಪಿ ಬಿದ್ದು ಭೀಮಾ ನದಿಯಲ್ಲಿ ಕೊಚ್ಚಿಹೋದ ವೃದ್ಧ

ವಿಜಯಪುರ: ಆಯತಪ್ಪಿ ಸೇತುವೆ ಮೇಲಿಂದ ಬಿದ್ದು ಭೀಮಾ ನದಿಯಲ್ಲಿ ವೃದ್ಧ ಕೊಚ್ಚಿಹೋದ ಘಟನೆ ವಿಜಯಪುರ ಜಿಲ್ಲೆಯ ಕರ್ನಾಟಕ-ಮಹಾರಾಷ್ಟ್ರದ ಗಡಿ ಭಾಗದಲ್ಲಿನ ಭಂಡಾರಕವಟೆ ಸೇತುವೆ ಬಳಿ ನಡೆದಿದೆ.

ಭಂಡಾರಕ ವಟೆ ಬಳಿ ಭೀಮಾ ನದಿಗೆ ಅಡ್ಡಲಾಗಿ ಈ ಸೇತುವೆ ನಿರ್ಮಿಸಲಾಗಿದೆ. ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ಜಿಲ್ಲೆಯ ಕಂದಲಗಾಂವ ಗ್ರಾಮದ ಶಂಕರ ಕೋಲೆ(65) ಕೊಚ್ಚಿಹೋದ ವೃದ್ಧನಾಗಿದ್ದು, ಬೈಕ್‍ನಲ್ಲಿ ಸೇತುವೆ ಮೇಲೆ ಸಂಚರಿಸುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದು ಅವಘಡ ಸಂಭವಿಸಿದೆ.

ಮಹಾರಾಷ್ಟ್ರದಿಂದ ನಂದೂರ ಗ್ರಾಮದಿಂದ ಕಂದಲಗಾಂವ ಗ್ರಾಮಕ್ಕೆ ಹೊರಟಿದ್ದ, ವೇಳೆ ಅವಘಢ ಸಂಭವಿಸಿದೆ. ಸ್ಥಳಕ್ಕೆ ಮಹಾರಾಷ್ಟ್ರದ ಮಂದ್ರೂಪ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಚ್ಚಿಹೋದ ವ್ಯಕ್ತಿಗಾಗಿ ಶೋಧ ಕಾರ್ಯವನ್ನು ಅಗ್ನಿಶಾಮಕ ದಳ ಪ್ರಾರಂಭಿಸಿದೆ. ಸೇತುವೆಗೆ ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದ್ದು, ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *