ಭಾರೀ ಕುತೂಹಲಕ್ಕೆ ಕಾರಣವಾದ ಡಿಕೆಶಿ ಆಪ್ತ ಮಿಥುನ್ ರೈ ನಡೆ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತ ಮಿಥುನ್ ರೈ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಉಮೇದುವಾರಿಕೆಯಿಂದ ಹಿಂದೆ ಸರಿದಿರುವ ಬಗ್ಗೆ ಮಿಥುನ್ ರೈ ಫೇಸ್‍ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ.

ಮಿಥುನ್ ರೈ ಪೋಸ್ಟ್: ನಾನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಆಪ್ತನಾಗಿರುವ ಕಾರಣ, ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದಂತೆ ನಾನು ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಉಮೇದುವಾರಿಕೆಯಿಂದ ಹಿಂದೆ ಸರಿಯುತ್ತಿದ್ದೇನೆ. ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಚುನಾವಣೆ ಆರಂಭಗೊಂಡ ದಿನದಿಂದಲೂ ಮಿಥುನ್ ರೈ ಗೆಲ್ಲುವ ಅಭ್ಯರ್ಥಿ ಎಂದೇ ಅಂದಾಜಿಸಲಾಗಿತ್ತು. ಮಿಥುನ್ ರೈ ಸಹ ಭರ್ಜರಿ ಪ್ರಚಾರ ನಡೆಸಿದ್ದರು.

Comments

Leave a Reply

Your email address will not be published. Required fields are marked *