ಭೀಕರ ರಸ್ತೆ ಅಪಘಾತ- 6 ಮಕ್ಕಳು ಸೇರಿ 14 ಮಂದಿ ದಾರುಣ ಸಾವು

– ಮದ್ವೆಗೆ ಹೋಗಿ ವಾಪಸ್ಸಾಗ್ತಿದ್ದಾಗ ಅಗಘಡ

ಲಕ್ನೋ: ಬೊಲೆರೋ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಮಕ್ಕಳು ಸೇರಿ ಒಟ್ಟು 14 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಪ್ರತಾಪ್ ಗರ್ ನಲ್ಲಿ ನಡೆದಿದೆ.

ಈ ಘಟನೆ ಮಣಿಕಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪ್ರಯಾಗರಾಜ್- ಲಕ್ನೋ ಹೆದ್ದಾರಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ, ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಬೊಲೆರೋದಲ್ಲಿದ್ದವರು ನಬಬ್ ಗಂಜ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ.

Comments

Leave a Reply

Your email address will not be published. Required fields are marked *