ಭೀಮನ ಡೈಲಾಗ್ ಹೇಳಿ ಮಿಂಚಿದ ಶಾಸಕ ಶಿವಲಿಂಗೇಗೌಡ

ಹಾಸನ: ಸಾಮಾಜಿಕ ನಾಟಕದ ಉದ್ಘಾಟನೆಗೆ ತೆರಳಿದ್ದ ಹಾಸನ ಜಿಲ್ಲೆಯ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹಾಡು ಹೇಳುವ ಮೂಲಕ ಜನರನ್ನು ರಂಜಿಸಿದ್ದಾರೆ.

ಹಾಸನ ಜಿಲ್ಲೆಯ ದಿಬ್ಬೂರಿನಲ್ಲಿ ನಡೆದ ಸಾಮಾಜಿಕ ನಾಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಿವಲಿಂಗೇಗೌಡ ತೆರಳಿದ್ದರು. ಈ ವೇಳೆ ಭಾಷಣ ಮಾಡಿದ ನಂತರ ಪ್ರೇಕ್ಷಕರು, ಶಾಸಕರ ಬಳಿ ಕುರುಕ್ಷೇತ್ರ ನಾಟಕದ ಭೀಮನ ಪಾತ್ರ ಅಭಿನಯಿಸಿ ತೋರಿಸುವಂತೆ ಪಟ್ಟು ಹಿಡಿದರು.

ಆಗ ಶಾಸಕ ಶಿವಲಿಂಗೇಗೌಡ ಅಲ್ಲಿ ನೆರೆದಿದ್ದ ಜನರ ಮುಂದೆ ಭೀಮನ ಪಾತ್ರವನ್ನು ಡೈಲಾಗ್ ಹೇಳುವುದರ ಜೊತೆಗೆ ಅಭಿನಯ ಮಾಡಿ ತೋರಿಸಿದ್ದಾರೆ.

Comments

Leave a Reply

Your email address will not be published. Required fields are marked *