ಮಂಗಳೂರಿನ ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಯಿಂದ ಕೊರೊನಾ ಸಂತ್ರಸ್ತರಿಗೆ ದಿನಸಿ ಸಾಮಾಗ್ರಿ ಕಿಟ್

– ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ಸಂರಕ್ಷಣಾ ಸಲಕರಣೆ ವಿತರಣೆ

ಮಂಗಳೂರು: ಬೆಂಗಳೂರಿನಲ್ಲಿ 100 ಆಮ್ಲಜನಕಯುಕ್ತ ಬೆಡ್ ಗಳು (ಎಚ್‍ಡಿಯುನೊಂದಿಗೆ) ಮತ್ತು ಕೋವಿಡ್ ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಕೊರೊನಾ ಮಹಾಮಾರಿಯ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಪ್ರೆಸಿಡೆನ್ಸಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷ ನ್ ಮಂಗಳೂರಿನ ನೀರುಮಾರ್ಗದ ಕೆಲರಾಯಿ ನಲ್ಲಿರುವ ತಮ್ಮ ಅಂಗ ಸಂಸ್ಥೆ ಯಾದ ಪ್ರೆಸಿಡೆನ್ಸಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ವತಿಯಿಂದ ನೀರುಮಾರ್ಗ ಪಂಚಾಯತ್ ಸಹಯೋಗ ದೊಂದಿಗೆ ನೀರುಮಾರ್ಗ ಗ್ರಾಮ ಪಂಚಾಯತ್‍ನ 100 ಕೊರೋನಾ ಸಂತ್ರಸ್ತರಿಗೆ ದಿನಸಿ ಸಾಮಾಗ್ರಿಗಳ ಕಿಟ್ ಹಾಗೂ 11ಆಶಾ ಕಾರ್ಯಕರ್ತೆಯರಿಗೆ ಪಿಪಿಇ ಕಿಟ್, ಆಕ್ಸಿಮೀಟರ್ ಗಳನ್ನು ಶಾಲಾ ವಠಾರದಲ್ಲಿಂದು ವಿತರಿಸಲಾಯಿತು.

ಪ್ರೆಸಿಡೆನ್ಸಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಸ್ಥಳೀಯ ಗ್ರಾಮ ಪಂಚಾಯತ್ ಸಹಯೋಗ ದೊಂದಿಗೆ ಅಗತ್ಯವಿರುವವರಿಗೆ ಆಕ್ಸಿಮೀಟರ್, ರೇಷನ್ ಕಿಟ್ ಮತ್ತು ಪಿಪಿಇ ಕಿಟ್‍ಗಳನ್ನು ವಿತರಿಸುವ ಮೂಲಕ ಕೊರೋನಾ ನಿಯಂತ್ರಣ ಹೋರಾಟದಲ್ಲಿ ಬೆಂಬಲವನ್ನು ನೀಡುತ್ತಿದೆ.ಇದು ಇತರರಿಗೂ ಪ್ರೇರಣೆ ನೀಡುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ಮಧುಲಿಕ ತಿಳಿಸಿದ್ದಾರೆ. ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಧನವಂತಿ ಮತ್ತು ಸದಸ್ಯ ಶ್ರೀಧರ ಮತ್ತು ಪಂಚಾಯತ್ ಪಿಡಿಒ ಸುಧೀರ್ ಕೋವಿಡ್ ಸಂತ್ರಸ್ತರಿಗೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ನೆರವು ನೀಡಲು ಮುಂದೆ ಬಂದ ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ಬೊಂಡಂತಿಲ ಗ್ರಾಮದ ಕೊರೋನಾ ಕಾರ್ಯಪಡೆಯ ಸದಸ್ಯ ಅಬ್ದುಲ್ ಹಮೀದ್, ನೀರುಮಾರ್ಗ ಗ್ರಾಮ ಪಂಚಾಯತ್ ಕೋವಿಡ್ 19 ಟಾಸ್ಕ್ ಫೋರ್ಸ್ ನ ಸದಸ್ಯ ಭಾಸ್ಕರ ಜೆ ಉಪಸ್ಥಿತರಿದ್ದರು. ರಮಾನಾಥ ಕಾರ್ಯಕ್ರಮ ನಿರೂಪಿಸಿದರು.

Comments

Leave a Reply

Your email address will not be published. Required fields are marked *