ಮಂಡ್ಯದಲ್ಲಿ ದಂಡುಪಾಳ್ಯ ರೀತಿಯ ಮರ್ಡರ್

ಮಂಡ್ಯ: ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಜಿಲ್ಲೆಯ ಶ್ರೀರಂಗಪಟ್ಟಣದ ಲಾಡ್ಜ್ ನಲ್ಲಿ ಘಟನೆ ನಡೆದಿದ್ದು, ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಡಿಯೊಂದು ಲಾಡ್ಜ್ ಗೆ ಆಗಮಿಸಿದೆ. ರಾತ್ರಿ ವೇಳೆಗೆ ಮಹಿಳೆಯನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.

ಜೋಡಿ ಇದ್ದ ರೂಮ್‍ನಿಂದ ರಕ್ತ ಹೊರ ಬರುತ್ತಿದ್ದದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಕತ್ತು ಕೊಯ್ದು ಚಾಕು ಸ್ಥಳದಲ್ಲೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಭೀಕರ ಕೊಲೆ ನಡೆದ ಘಟನೆಯಿಂದ ಶ್ರೀರಂಗಪಟ್ಟಣ ಜನತೆ ಬೆಚ್ಚಿ ಬಿದ್ದಿದ್ದಾರೆ. ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments

Leave a Reply

Your email address will not be published. Required fields are marked *