ಮಂಡ್ಯದಲ್ಲಿ ಧಾರಾಕಾರ ಮಳೆ – ಪಕ್ಕದ್ಮನೆಯ ಛಾವಣಿ ಕೆಳಗೆ ರಾತ್ರಿ ಕಳೆದ ಕುಟುಂಬ

ಮಂಡ್ಯ: ಜಿಲ್ಲೆಯಲ್ಲಿ ರಾತ್ರಿ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಭಾರೀ ಮಳೆಗೆ ಅನೇಕ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ ಹಾನಿಯಾಗಿದೆ. ಅಷ್ಟೇ ಅಲ್ಲದೇ ಭಾರೀ ಮಳೆಯಿಂದಾಗಿ ಬಡ ಕುಟುಂಬವೊಂದು ನೆರೆ ಮನೆಯ ಛಾವಣಿಯಲ್ಲಿ ರಾತ್ರಿ ಕಳೆದಿದೆ.

ಮದ್ದೂರು ಪಟ್ಟಣದಲ್ಲಿ ಮಳೆಯಿಂದ ಬಡ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಗಿದೆ. ರಾತ್ರಿ ಏಕಾಏಕಿ ಸುರಿದ ಮಳೆಯಿಂದಾಗಿ ಮನೆಗೆ ನೀರು ನುಗ್ಗಿದೆ. ಪರಿಣಾಮ ವೃದ್ಧ ಮಹಿಳೆಯೊಬ್ಬರು ಸಣ್ಣ ಮಕ್ಕಳೊಂದಿಗೆ ಚಳಿಯಲ್ಲಿ ಪಕ್ಕದ ಮನೆಯ ಛಾವಣಿ ಕೆಳಗೆ ರಾತ್ರಿಯೆಲ್ಲಾ ಕಾಲ ಕಳೆದಿದ್ದಾರೆ. ಅಷ್ಟೇ ಅಲ್ಲದೇ ಮನೆಗೆ ನೀರು ನುಗ್ಗಿದ್ದರಿಂದ ದವಸ, ಧಾನ್ಯಗಳು ಸೇರಿ ಮನೆಯಲ್ಲಿದ್ದ ಪದಾರ್ಥಗಳು ನೀರು ಪಾಲಾಗಿದೆ.

ವೃದ್ಧ ಮಹಿಳೆ ನಾವು ಹೇಗೆ ಜೀವನ ಮಾಡುವುದು ಎಂದು ಕಂಗಾಲಾಗಿದ್ದಾರೆ. ಮಳೆಯಿಂದ ಹತ್ತಕ್ಕೂ ಹೆಚ್ಚು ಮರ, ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿವೆ. ಕಂಬಗಳು ಬಿದ್ದಿರುವುದರಿಂದ ರಾತ್ರಿಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.

Comments

Leave a Reply

Your email address will not be published. Required fields are marked *