ಮಕ್ಕಳ ಸಮವಸ್ತ್ರಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

ಶಿವಮೊಗ್ಗ: ಶಾಲಾ ಮಕ್ಕಳಿಗೆ ವಿತರಿಸಲು ಕೊಠಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಸಮವಸ್ತ್ರಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮದಲ್ಲಿ ನಡೆದಿದೆ.

ಮಾರುತಿಪುರದ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಸಲುವಾಗಿ ಕಳೆದ ನಾಲ್ಕು ದಿನಗಳ ಹಿಂದೆ ಶಿಕ್ಷಕರು ಸುಮಾರು 300 ಜೊತೆ ಸಮವಸ್ತ್ರ ತೆಗೆದುಕೊಂಡು ಬಂದು ಶಾಲೆಯ ಕೊಠಡಿಯೊಂದರಲ್ಲಿ ಇರಿಸಿ ಬೀಗ ಹಾಕಿಕೊಂಡು ತೆರಳಿದ್ದರು. ಆದರೆ ಇಂದು ಶಾಲಾ ಕೊಠಡಿ ಬೀಗ ತೆರೆದು ನೋಡಿದಾಗ ಎಲ್ಲಾ ಸಮವಸ್ತ್ರಗಳು ಬೆಂಕಿಗಾಹುತಿ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಘಟನೆ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಇನ್ನು ಘಟನೆ ಕುರಿತು ಶಾಲೆಯ ಶಿಕ್ಷಕರು ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ:ಪ್ರಿಯತಮನ ಮೇಲಿನ ಮೋಹಕ್ಕಾಗಿ ಸ್ಕೆಚ್ ಹಾಕಿ ಗಂಡನನ್ನೇ ಕೊಲ್ಲಿಸಿದ್ಳು!

Comments

Leave a Reply

Your email address will not be published. Required fields are marked *