ಮದ್ವೆ ಶಾಪಿಂಗ್‍ನಿಂದ ಬರ್ತಿದ್ದ ಕಾರಿಗೆ ಪೊಲೀಸ್ ವ್ಯಾನ್ ಡಿಕ್ಕಿ

– ಮೂವರು ಸಾವು, ಇಬ್ಬರಿಗೆ ಗಾಯ

ಚಂಡೀಗಢ: ಮದುವೆ ಶಾಪಿಂಗ್ ಮುಗಿಸಿ ಮನೆಗೆ ಬರುತ್ತಿದ್ದ ಮೂವರು ಸ್ನೇಹಿತರಿದ್ದ ಕಾರಿಗೆ ಪೊಲೀಸ್ ವಾಹನ ಬಂದು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹರಿಯಾಣದ ಕರ್ನಲ್ ಜಿಲ್ಲೆಯ ಮರ್ದನ್ಹೇರಿ ಗ್ರಾಮದ ಅಸ್ಸಾಂಧ್-ಕೈಥಲ್ ರಸ್ತೆಯಲ್ಲಿ ನಡೆದಿದೆ.

ಪೊಲೀಸ್ ವಾಹನ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ನೇಹಿತರು ಸಾವಿಗೀಡಾಗಿದ್ದಾರೆ. ಪೊಲೀಸ್ ವಾಹನದಲ್ಲಿದ್ದ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತ ಸ್ನೇಹಿತರನ್ನು ಪ್ರಯಾಗ್(20), ಕಾರ್ತಿಕ್(26) ಮತ್ತು ಸವಿಂದರ್ ಸಿಂಗ್(32) ಎಂದು ಗುರುತಿಸಲಾಗಿದೆ. ಪೊಲೀಸ್ ವಾಹನದಲ್ಲಿದ್ದ ಗಾಯಾಳುಗಳು ಪ್ರಕಾಶ್ ಮತ್ತು ಸುಮಿತ್ ಕುಮಾರ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ನೇಹಿತ ಸವಿಂದರ್ ಸಿಂಗ್ ಮದುವೆ ಶಾಪಿಂಗ್ ಮುಗಿಸಿ ಮನೆಗೆ ಕಾರಿನಲ್ಲಿ ಬರುತ್ತಿದ್ದರು. ಎದುರಿಗೆ ಬರುತ್ತಿದ್ದ ಪೊಲೀಸ್ ವಾಹನ ಟ್ರ್ಯಾಕ್ಟರ್ ಟ್ರೈಲರ್ ಇದ್ದಕ್ಕಿದ್ದಂತೆ ಎದುರಾಗಿದ್ದರಿಂದ ಅದನ್ನು ತಪ್ಪಿಸಲು ಪೊಲೀಸ್ ವಾಹನ ಚಾಲಕ ಬ್ರೇಕ್ ಹಾಕಿದ್ದಾನೆ. ನಂತರ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *