ಮನೆಗಳ್ಳತನ ಮಾಡ್ತಿದ್ದವರು ಅಂದರ್- 6 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಹುಬ್ಬಳ್ಳಿ: ಅವಳಿನಗರದ ವಿವಿಧೆಡೆ ಕಳ್ಳತನ ಮಾಡಿದ ಇಬ್ಬರನ್ನೂ ಹುಬ್ಬಳ್ಳಿಯ ನವನಗರ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಹುಬ್ಬಳ್ಳಿಯ ವೀರಮಾರುತಿ ನಗರದ ಭೀಮಣ್ಣ ಕ್ವಾಟಿ ಮತ್ತು ನಾಗರಾಜ ಕ್ವಾಟಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 6.32 ಲಕ್ಷ ಮೌಲ್ಯದ 158 ಗ್ರಾಂ ಬಂಗಾರ ಹಾಗೂ 3, 800 ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರಿಬ್ಬರು ಭೈರಿದೇವರಕೊಪ್ಪದಲ್ಲಿ ನಡೆದ ಎರಡು ಮನೆ ಹಾಗೂ ನವನಗರದ ಕೆಸಿಸಿ ಕಾಲೋನಿಯಲ್ಲಿ ಒಂದು ಮನೆ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರಿಬ್ಬರನ್ನ ನವನಗರ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಚಿನ್ನಾಭರಣ ಜಪ್ತಿ ಮಾಡುವಲ್ಲಿ ಯಶ್ವಸಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನ ಹಿಡಿಯುವಲ್ಲಿ ನವನಗರ ಪೊಲೀಸರು ಯಶ್ವಸಿಯಾದ ಪರಿಣಾಮ ಪೊಲೀಸ್ ಆಯುಕ್ತರು ನವನಗರ ಠಾಣೆಯ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *