ಮಮತಾ ನಾಡಿನಲ್ಲಿ ಅಮಿತ್ ಶಾ ಪ್ರವಾಸ

-ಟಿಎಂಸಿ ನಾಯಕರ ರಾಜೀನಾಮೆ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖಂಡರಾದ ಅಮಿತ್ ಶಾ ಎರಡು ದಿನಗಳ ಪ್ರವಾಸಕ್ಕೆ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ್ದಾರೆ. ಬಿಜೆಪಿ ನಾಯಕರು ವಿಮಾನ ನಿಲ್ದಾಣದಲ್ಲಿ ಶಾ ಅವರನ್ನು ಸ್ವಾಗತಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ತಮ್ಮ ಪಕ್ಷದ ಪ್ರಚಾರ, ಮತ್ತು ಕಾರ್ಯವೈಖರಿಯನ್ನು ತಿಳಿಯಲು ಕೆಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಿಲ್ಭದ್ರ ದತ್ತ ಇಂದು ಬೆಳಗ್ಗೆ ಟಿಎಂಸಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆಯಷ್ಟೇ ಸುವೇಂದು ಅಧಿಕಾರಿ ಮತ್ತು ಜಿತೇಂದ್ರ ತಿವಾರಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳ ಭೇಟಿ ಹಿನ್ನೆಲೆಯಲ್ಲಿ ಟಿಎಂಸಿ ಶಾಸಕರು ರಾಜೀನಾಮೆ ಸಲ್ಲಿಸುತ್ತಿದ್ದಾರೆ.

ಕೋಲ್ಕತ್ತಾಗೆ ಆಗಮಿಸಿದ ನಂತರ ಅಮಿತ್ ಶಾ ಗುರುದೇವ್ ಟ್ಯಾಗೋರ್, ಈಶ್ವರ್ ಚಂದ್ರ ವಿದ್ಯಾ ಸಾಗರ್ ಮತ್ತು ಶ್ಯಾಮಾ ಪ್ರಸಾದ್ ಮುಖರ್ಜಿ ಅವರು ಇದ್ದಂತಹ ಶ್ರೇಷ್ಠ ಪೂಜ್ರು ಇದ್ದ ಭೂಮಿಗೆ ನಾನು ನಮಸ್ಕರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಮಿಡ್ನಾಪುರದಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಶಾ ಮಾತನಾಡಲಿದ್ದಾರೆ. ರ್ಯಾಲಿಯಲ್ಲಿ ಟಿಎಂಸಿ ನಾಯಕರು ಬಿಜೆಪಿಗೆ ಸೇರುವ ಸಾಧ್ಯತೆಯಿದೆ.

Comments

Leave a Reply

Your email address will not be published. Required fields are marked *