ಮರದ ಕೆಳಗೆ, ನಡು ರಸ್ತೆಯಲ್ಲಿ, ಬೆಳೆಗಳ ಮಧ್ಯೆ, ಜನ ಎಲ್ಲಿ ಸಿಗುತ್ತಾರೋ ಅಲ್ಲಿ ಲಸಿಕೆ

– ಗ್ರಾಮೀಣ ಜನರಿಗೆ ಲಸಿಕೆ ಹಾಕಲು ಆರೋಗ್ಯ ಸಿಬ್ಬಂದಿ ಮಾಸ್ಟರ್ ಪ್ಲಾನ್

ಯಾದಗಿರಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಲಸಿಕೆಗಾಗಿ ಬಡಿದಾಡಿಕೊಳ್ಳುತ್ತಿದ್ದರೆ, ಯಾದಗಿರಿಯಲ್ಲಿ ಮಾತ್ರ ಮನೆಗೆ ಹೋಗಿ ಲಸಿಕೆ ಕೊಟ್ಟರೂ ಜನ ಮಾತ್ರ ಲಸಿಕೆ ಪಡೆಯಿತ್ತಿಲ್ಲ. ಇನ್ನೂ ಗ್ರಾಮೀಣ ಭಾಗದ ಜನ ಬೆಳಗ್ಗೆ ಜಮೀನು ಕೆಲಸಕ್ಕೆ ಹೋದರೆ ಮತ್ತೆ ರಾತ್ರಿಯೇ ಮನೆಗೆ ಸೇರುತ್ತಾರೆ. ಇದರಿಂದಾಗಿ ಗ್ರಾಮೀಣ ಭಾಗದಲ್ಲಿ ಲಸಿಕೆ ವಿತರಣೆ ಕುಂಠಿತವಾಗಿದೆ.

ಯಾದಗಿರಿ ಆರೋಗ್ಯ ಸಿಬ್ಬಂದಿ ಮಾತ್ರ ಜನರಿಗೆ ಶತಾಗತಾಯ ಲಸಿಕೆ ನೀಡಲು ಹರಸಹಾಸ ಪಡುತ್ತಿದ್ದಾರೆ. ಸೀದಾ ರೈತರ ಜಮೀನುಗಳಿಗೆ ತೆರಳಿ ಸಿಬ್ಬಂದಿ ಜಮೀನುಗಳಲ್ಲಿಯೇ ಲಸಿಕೆ ವಿತರಣೆ ಮಾಡುತ್ತಿದ್ದಾರೆ. ಮರದ ಕೆಳಗೆ, ರಸ್ತೆಯಲ್ಲಿ, ಬೆಳೆಗಳ ಮಧ್ಯೆ ಹೀಗೆ ಜನ ಎಲ್ಲಿ ಸಿಗುತ್ತಾರೋ ಅಲ್ಲಿ ಲಸಿಕೆ ಹಾಕಲಾಗುತ್ತಿದೆ.

ಡಾ.ಲಕ್ಷ್ಮಿಕಾಂತ್ ಮತ್ತು ಅವರ ತಂಡ ಈ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಲಸಿಕೆ ಪಡೆಯಲು ಕುಂಟು ನೆಪ ಹೇಳಿ, ಜಮೀನಿಗೆ ಹೋಗತ್ತಿದ್ದ ಜನ ಆರೋಗ್ಯ ಸಿಬ್ಬಂದಿ ಪ್ಲಾನ್ ಗೆ ಥಂಡಾ ಹೊಡೆದಿದ್ದಾರೆ. ಇದನ್ನೂ ಓದಿ:ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

Comments

Leave a Reply

Your email address will not be published. Required fields are marked *