ಮರಳಿ ಟಿಎಂಸಿ ಗೂಡು ಸೇರಿದ ಮುಕುಲ್ ರಾಯ್

ಕೋಲ್ಕತ್ತಾ: ಮುಕುಲ್ ರಾಯ್ ಮತ್ತು ಪುತ್ರ ಸುಭ್ರಾಂಶು ರಾಯ್ ಮತ್ತೆ ಟಿಎಂಸಿಗೆ ಮರಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮೊದಲು ಬಿಜೆಪಿ ಸೇರಿದ್ದ ಮುಕುಲ್ ರಾಯ್ ಈಗ ಮಮತಾ ಬಣವನ್ನು ಸೇರಿದ್ದಾರೆ.

ಸಿಎಂ ಮಮತಾ ಸಮ್ಮುಖದಲ್ಲಿ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿ ಮಾತನಾಡಿದ ಮುಕುಲ್ ರಾಯ್, ಮತ್ತೆ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡಲು ಸಂತಸವಾಗುತ್ತದೆ. ಬಿಜೆಪಿಯಲ್ಲಿರಲು ನನಗೆ ಸಾಧ್ಯವಿಲ್ಲ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ಮುಕುಲ್ ರಾಯ್ ಮತ್ತೆ ಮರಳಿ ಮನೆಗೆ ಬಂದಿದ್ದಾರೆ. ಮತ್ತಷ್ಟು ಜನರ ಪಕ್ಷಕ್ಕೆ ಬರಲಿದ್ದಾರೆ. ಒಲ್ಡ್ ಇಸ್ ಆಲ್ವೇಸ್ ಗೋಲ್ಡ್ ಎಂದು ತಿಳಿಸಿದರು. ಇದನ್ನೂ ಓದಿ: ವ್ಯಾಕ್ಸಿನ್ ಸರ್ಟಿಫಿಕೇಟ್ ಮೇಲೆ ಮಮತಾ ಬ್ಯಾನರ್ಜಿ ಫೋಟೋ – ಕೆಂಡಾಮಂಡಲವಾದ ಬಿಜೆಪಿ

ಮಮತಾ ಬ್ಯಾನರ್ಜಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮುಕುಲ್ ರಾಯ್ 2017ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಬಿಜೆಪಿಯ ಪ್ರಮುಖ ಸಭೆಗೆ ಮುಕುಲ್ ರಾಯ್ ಗೈರಾದ ಬೆನ್ನಲ್ಲೇ ಅವರು ಮತ್ತೆ ಟಿಎಂಸಿ ಸೇರಲಿದ್ದಾರೆ ಎನ್ನುವುದು ಖಚಿತವಾಗಿತ್ತು. ಕೋವಿಡ್ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಕುಲ್ ರಾಯ್ ಅವರ ಪತ್ನಿಯನ್ನು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

2017ರಲ್ಲಿ ಟಿಎಂಸಿ ತೊರೆದಿದ್ದ ಮುಕುಲ್ ರಾಯ್ ಅವರನ್ನು 2020ರ ಸೆಪ್ಟೆಂಬರ್ 26 ರಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಿತ್ತು. ಸದ್ಯ ಇವರು ಪಶ್ಚಿಮ ಬಂಗಾಳದ ಕೃಷ್ಣ ನಗರದ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ.

ಪಶ್ಚಿಮ ಬಂಗಾಲ ಬಿಜೆಪಿಯಲ್ಲಿ ಸುವೇಂದು ಅಧಿಕಾರಿ, ಮಕುಲ್ ರಾಯ್ ಬಣ ಇತ್ತು. ಬಿಜೆಪಿ ಹೈಕಮಾಂಡ್ ನಾಯಕರು ಸುವೇಂದು ಅಧಿಕಾರಿಗೆ ಹೆಚ್ಚಿನ ಪ್ರಶಾಸ್ತ್ಯ ನೀಡಿದ್ದು ಮುಕುಲ್ ರಾಯ್ ಅಸಮಾಧಾನಕ್ಕೆ ಕಾರಣವಾಗಿತ್ತು. ಎರಡನೇ ಅತಿ ಹೆಚ್ಚು ಸ್ಥಾನ ಸಿಕ್ಕಿದ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿಯನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿ ವಿರೋಧ ಪಕ್ಷದ ಸ್ಥಾನವನ್ನು ಬಿಜೆಪಿ ನೀಡಿತ್ತು.

Comments

Leave a Reply

Your email address will not be published. Required fields are marked *