ಮಳೆಯ ನಡುವೆಯೂ ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರು

– ರಾಜ್ಯಾದ್ಯಂತ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಸುರಿಯುತ್ತಿರುವ ಮಳೆಯ ನಡುವೆಯೂ ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರದ ಭರಾಟೆ ಜೋರಾಗಿಯೇ ಇತ್ತು. ಹೂ, ಸೊಪ್ಪು, ತರಕಾರಿ ಸೇರಿದಂತೆ ವಿವಿಧ ವಸ್ತುಗಳ ಖರೀದಿಗಾಗಿ ಜನ ಮುಗಿಬಿದ್ದಿದ್ದಾರೆ. ಮಳೆ ಹಿನ್ನೆಲೆ ಹೂವಿನ ವ್ಯಾಪಾರ ಸಹ ಜೋರಾಗೆ ಇದ್ದು, ಮಳೆ ಕಾರಣಕ್ಕೆ ಕಡಿಮೆ ಬೆಲೆಗೆ ವ್ಯಾಪಾರಿಗಳು ಹೂವು ಮಾರಾಟ ಮಾಡುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ನಿಯಮ ಉಲ್ಲಂಘನೆ ಮಾಡುವವರಿಗೆ ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲೆ ಮಾರ್ಷಲ್ ಗಳು ದಂಡ ಪ್ರಯೋಗಕ್ಕೆ ಮುಂದಾಗಿದ್ದರು. ನಿಯಮ ಉಲ್ಲಂಘನೆ ಹಿನ್ನೆಲೆ ದಂಡ ಹಾಕಿದಕ್ಕಾಗಿ ಕೆಲವರು ಮಾರ್ಷಲ್ ಗಳು ಜೊತೆ ಮಾತಿನ ಚಕಮಕಿಗೆ ಮುಂದಾದರೆ. ಇನ್ನೂ ಕೆಲವರು ನಿರ್ಲಕ್ಷದ ಉತ್ತರದ ಜೊತೆಗೆ ದಂಡ ಪಾವತಿ ಮಾಡಿ ತೆರಳಿದ್ರು.

ಮಾಸ್ಕ್ ಹಾಕದೇ ಬಿಬಿಎಂಪಿ ಸಿಬ್ಬಂದಿ ಎಂದು ಹೇಳಿ ಬಂದ ಯುವಕನಿಗೆ ಅಧಿಕಾರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ವೇಳೆ ಯುವಕ 6 ತಿಂಗಳಿಂದ ಸಂಬಳ ಆಗಿಲ್ಲ ಬಿಟ್ಟುಬಿಡಿ ಸರ್ ಎಂದು ಗೊಗರೆದಿದ್ದಾನೆ. ಬಳಿಕ ಯುವಕನಿಕೆ ಆರೋಗ್ಯಾಧಿಕಾರಿ ಸರಿಯಾಗಿ ಮಾಸ್ಕ್ ಧರಿಸುವಂತೆ ಬುದ್ಧಿ ಹೇಳಿ ಕಳುಹಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಗೆ ಸೇರಿದ್ರೆ, ಮಕ್ಕಳ ಖಾತೆಗೆ 1 ಸಾವಿರ ರೂ. ಜಮೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರಲ್ಲಿ ರಾತ್ರಿಯಿಡೀ ಮಳೆಯಾಗಿದ್ದು, ಬೆಳಗ್ಗೆಯೂ ಮುಂದುವರಿದಿದೆ. ರಾಜ್ಯಾದ್ಯಂತ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಜುಲೈ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದ್ದು, ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿ, ಅದ್ರೇ ಬೆಂಗಳೂರಲ್ಲಿ ಜಡಿ ಮಳೆ ಮುಂದುವರೆಯೋ ಸಾಧ್ಯತೆ ಇದೆ.

Comments

Leave a Reply

Your email address will not be published. Required fields are marked *