ಮಾಜಿ ಸಚಿವ ಎಂ.ವಿ. ಕೃಷ್ಣಪ್ಪ ಪತ್ನಿ ಪ್ರಮೀಳಮ್ಮ ನಿಧನ

ಕೋಲಾರ: ಕೇಂದ್ರ ಮಾಜಿ ಸಚಿವ ಹಾಗೂ ಕರ್ನಾಟಕ ಹೈನೋದ್ಯಮದ ಪಿತಾಮಹ ಎಂದೇ ಖ್ಯಾತಿ ಪಡೆದ ದಿವಂಗತ ಎಂ.ವಿ. ಕೃಷ್ಣಪ್ಪ ಅವರ ಪತ್ನಿ ಪ್ರಮೀಳಮ್ಮ ಕೃಷ್ಣಪ್ಪ (95) ನಿಧನರಾಗಿದ್ದಾರೆ.

ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಇಂದು ಸಂಜೆ 4 ಗಂಟೆಗೆ ಕೆಜಿಎಫ್ ತಾಲೂಕಿನ ಬಂಗಾರತಿರುಪತಿ (ಗುಟ್ಟಹಳ್ಳಿ) ಬಳಿಯ ಸ್ವಂತ ತೋಟದ ಭೂಮಿಯಲ್ಲಿರುವ ಪತಿ, ದಿವಂಗತ ಎಂ.ವಿ.ಕೃಷ್ಣಪ್ಪ ಅವರ ಸಮಾಧಿ ಬಳಿಯಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರರಾದ ಅಶೋಕ್ ಕೃಷ್ಣಪ್ಪ ಮತ್ತು ಜಯಸಿಂಹ ಕೃಷ್ಣಪ್ಪ ಹೇಳಿದ್ದಾರೆ. ಇದನ್ನೂ ಓದಿ: ಬೇಟೆಯಾಡಲು ಹೋದವನೇ ಬೇಟೆಯಾದ ?

ಕೃಷ್ಣಪ್ಪ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕೋಲಾರ ಜಿಲ್ಲೆಗೆ ಅಪಾರ ಕೊಡುಗೆಗಳನ್ನು ನೀಡಿದ್ದರು. ಅವರ ಸಾಧನೆಯಲ್ಲಿ ಮೃತ ಪತ್ನಿ ಪ್ರಮೀಳಮ್ಮರವರ ಪಾತ್ರವೂ ಇತ್ತು. ಅಲ್ಲದೆ ಸ್ವಾತಂತ್ರ್ಯ ಹೋರಾಟದಲ್ಲಿ ಕೃಷ್ಣಪ್ಪ ಅವರ ಜೊತೆ ಭಾಗಿಯಾಗಿದ್ದ ಪ್ರಮೀಳಮ್ಮ ಹಲವು ಬಾರಿ ಜೈಲಿಗೂ ಹೋಗಿದ್ದರು.

Comments

Leave a Reply

Your email address will not be published. Required fields are marked *