ಮಾಜಿ ಸಚಿವ ಶಾಮನೂರು ಮೆಡಿಕಲ್ ಕಾಲೇಜ್ ಮೇಲೆ ಐಟಿ ದಾಳಿ

ದಾವಣಗೆರೆ: ಕಾಂಗ್ರೆಸ್ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗೋವಾ ಹಾಗೂ ಬೆಳಗಾವಿಯಿಂದ ಬಂದ ಆರು ಜನ ಐಟಿ ಅಧಿಕಾರಿಗಳ ತಂಡ ಶಾಮನೂರು ಶಿವಶಂಕರಪ್ಪ ಒಡೆತನದಲ್ಲಿರುವ ದಾವಣಗೆರೆಯ ಜೆಜೆಎಂ, ಎಸ್‍ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್‍ಗಳಲ್ಲಿ ಕಡತ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕೆಲ ವಿದ್ಯಾರ್ಥಿನ್ನು ಅನಿರೀಕ್ಷಿತವಾಗಿ ಭೇಟಿ ಮಾಡಿ ಶುಲ್ಕ ತುಂಬದ ವಿವರ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *