ಮಾತು ನಿಲ್ಲಿಸಿದಕ್ಕೆ ಯುವತಿ ಮೇಲೆ ಯುವಕನಿಂದ ಆ್ಯಸಿಡ್ ದಾಳಿ

ಲಕ್ನೋ: ಯುವತಿ ಮಾತು ನಿಲ್ಲಿಸಿದ್ದಕ್ಕೆ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸುವ ಮೂಲಕ ಕ್ರೂರವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ನಂತರ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಹಾಗೂ ಯುವತಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಯುವತಿಯನ್ನು ಮೀರತ್‍ನ ಮತ್ತೊಂದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಕುರಿತಂತೆ ಪೊಲೀಸ್ ವರಿಷ್ಠಾಧಿಕಾರಿ ನೀರಜ್ ಜಾದಾನ್, ಘಟನೆ ಭಾನುವಾರ ಸಂಜೆ ಸುಮಾರು 7.30ರ ಹೊತ್ತಿಗೆ ಯುವತಿ ಮೇಲೆ ಆರೋಪಿ ಆ್ಯಸಿಡ್ ದಾಳಿ ನಡೆಸಿದ್ದು, ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿಸಿದ್ದಾರೆ.

ಅಲ್ಲದೆ ಹಾಪುರ್ ಪೊಲೀಸ್ ಟ್ವಿಟ್ಟರ್ ಖಾತೆಯಲ್ಲಿ, ಆರೋಪಿಯನ್ನು ರಹಿಲ್ ಅಥವಾ ರೋಹಲ್ ಖಾನ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದೀಗ ಆತನಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗಿದೆ ಎಂದು ಹೇಳಿರುವ ವೀಡಿಯೋವೊಂದನ್ನು ಅಧಿಕಾರಿಯೊಬ್ಬರು ಶೇರ್ ಮಾಡಿಕೊಂಡಿದ್ದಾರೆ.

ವಿಚಾರಣೆ ವೇಳೆ ಸ್ನೇಹದ ಆರಂಭದಲ್ಲಿಯೇ ಯುವತಿ ಆರೋಪಿಯೊಂದಿಗೆ ಮಾತು ಬಿಟ್ಟಿದ್ದರಿಂದ ಆ್ಯಸಿಡ್ ದಾಳಿ ನಡೆಸಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *