ಮಾನ್ಯ ಮುಖ್ಯಮಂತ್ರಿಗಳೇ, ಶಿಕ್ಷಣ ಸಚಿವರೇ ಕಣ್ತೆರೆಯಿರಿ: ಸಿದ್ದರಾಮಯ್ಯ

ಬೆಂಗಳೂರು: ಪಿಯು ಉಪನ್ಯಾಸಕರ ನೇಮಕ ವಿಚಾರವಾಗಿ ಕೌನ್ಸಿಲಿಂಗ್ ಮುಗಿದಿದ್ದರು ಆದೇಶ ಕಾಪಿ ನೀಡದ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಎದುರು ಅರ್ಹ ಅಭ್ಯರ್ಥಿಗಳು ಇಂದು ಪ್ರತಿಭಟನೆ ನಡೆಸಿದರು. ಅಭ್ಯರ್ಥಿಗಳ ಪರ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಹಾಗೂ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಶಿಕ್ಷಣ ಇಲಾಖೆಯ ವಿಳಂಬ ನೀತಿಯನ್ನ ಪ್ರಶ್ನಿಸಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಮಾನ್ಯ ಮುಖ್ಯಮಂತ್ರಿಗಳೇ, ಶಿಕ್ಷಣ ಸಚಿವರೇ ಕಣ್ತೆರೆಯಿರಿ. ಪಿಯುಸಿ ನೇಮಕಾತಿ ಪ್ರಕ್ರಿಯೆ ಮುಗಿದ ಮೇಲೆಯೂ ನೇಮಕಾತಿ ಪತ್ರ ದೊರೆಯದೇ ಈ ದಿನ ಮಳೆಯಲ್ಲಿಯೇ ಪಿಯುಸಿ ಮಂಡಳಿ ಎದುರು ಕೂತಿದ್ದಾರೆ. ಈಗಲಾದರೂ ಸಹ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನ ದೂರ ಮಾಡಿ ಎಂದು ಹೇಳಿದ್ದಾರೆ.

2015ರಲ್ಲಿ ಕರೆದಿದ್ದ ನೇಮಕಾತಿ ಪ್ರಕ್ರಿಯೆ ಅನ್ವಯ 2018 ರಲ್ಲಿ ಪರೀಕ್ಷೆ ನಡೆದಿತ್ತು. ಇದರಲ್ಲಿ 1,200 ಅಭ್ಯರ್ಥಿಗಳಿಗೆ ಈಗಾಗಲೇ ಕೌನ್ಸಿಲಿಂಗ್ ಮುಗಿದಿದೆ. ಆದರೂ ಆದೇಶ ಕಾಪಿ ನೀಡದೆ ಶಿಕ್ಷಣ ಇಲಾಖೆ ಸತಾಯಿಸುತ್ತಿದೆ. ಇಲಾಖೆ ವಿಳಂಬ ಧೋರಣೆ ವಿರೋಧಿ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ, ಹೋರಾಟಕ್ಕೆ ಬೆಂಬಲ ಸೂಚಿಸಿ, ಈ ಮಕ್ಕಳಿಗೆ ಅನ್ಯಾಯ ಆಗಲು ಬಿಡಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದೆ ಸರ್ಕಾರದೊಂದಿಗೆ ಮಾತಾನಾಡಿ ಆದೇಶ ಪತ್ರ ನೀಡುವಂತೆ ತಿಳಿಸುತ್ತೇನೆ. ಈಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಸರ್ಕಾರದ ಬಗ್ಗೆ ಈ ವೇಳೆ ಮಾತನಾಡುವುದಿಲ್ಲ. ಮಕ್ಕಳಿಗೆ ಅನ್ಯಾಯ ಆಗೋದಕ್ಕೆ ಬಿಡಲ್ಲ ಎಂದು ಹೇಳಿದರು.

Comments

Leave a Reply

Your email address will not be published. Required fields are marked *