ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು- ವಿಚಾರಣೆ ವೇಳೆ ಬಾಯಿಬಿಟ್ಟ ಕಿರಾತಕರು

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಕೆಲ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣಗಳನ್ನ ಕೊಟ್ಟಿದ್ದಾರೆ. ಮೂರು ಕಾರಣಗಳಿಂದಾಗಿ ಬೆಂಗಳೂರು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣ ಕೊಟ್ಟ ಕಿರಾತಕರು!
1. ಎನ್‍ಆರ್ ಸಿ ಸಿಟ್ಟೇ ಬೆಂಗಳೂರು ಗಲಭೆಗೆ ಕಾರಣವಂತೆ
2. ‘ನಮ್ಮನ್ನು ದೇಶ ಬಿಟ್ಟು ಓಡಿಸ್ತಾರೆ, ನಾವು ಹುಟ್ಟಿದ್ದು ಇಲ್ಲೇ’
3. ‘ನಮಗೆ ಸ್ವಾತಂತ್ರ್ಯ ಇಲ್ವಾ? ನಾವ್ಯಾಕೆ ದೇಶ ಬಿಡಬೇಕು?’

ಗಲಾಟೆ ನಡೆದ ಸ್ಥಳದಲ್ಲಿ ಮೂರು ಪ್ರಚೋದನೆಯ ಮಾತುಗಳನ್ನು ಕೇಳಿದ ಕಿಡಿಗೇಡಿಗಳು ದೊಂಬಿ ಎಬ್ಬಿಸಿದ್ದಾರೆ. ನಮ್ಮ ಕೋಪವನ್ನು ಗಲಭೆ ಮೂಲಕ ತೀರಿಸಿಕೊಂಡಿದ್ದೇವೆ ಎಂದು ಕಿಡಿಗೇಡಿಗಳು ಪೊಲೀಸರ ಮುಂದೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನವೀನ್ ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣದ ಕುರಿತು ಕೆಲ ಪೋಸ್ಟ್ ಮಾಡಿಕೊಂಡಿದ್ದು, ಗಲಭೆಗೆ ಕಾರಣವಾಗಿದೆ.

Comments

Leave a Reply

Your email address will not be published. Required fields are marked *