ಮೂರು ತಿಂಗಳಿಂದ ಜೈಲಲ್ಲಿರುವ ರಾಗಿಣಿಗೆ ಇಂದು ಸಿಗುತ್ತಾ ಬೇಲ್?

ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

ಸುಪ್ರೀಂಕೋರ್ಟಿನ ನ್ಯಾ. ರೊಹ್ನಿಂಟನ್ ನಾರಿಮನ್ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಈ ಅರ್ಜಿ ವಿಚಾರಣೆಗೆ ಬರುವ ನಿರೀಕ್ಷೆಗಳಿದೆ. ಇಂದು ಕೇವಲ ಅರ್ಜಿ ವಿಚಾರಣೆ ಕೈಗೆತ್ತಿಗೊಳ್ಳಲಿದ್ದು ವಿಚಾರಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿದೆ.

ಈಗಾಗಲೇ ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರನಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು, ಈ ಹಿನ್ನಲೆ ತುಪ್ಪದ ಹುಡುಗಿಗೂ ಜಾಮೀನು ಸಿಗುವ ಆಸೆ ಚಿಗುರುದೊಡಿದಿದೆ. ಹೀಗಾಗಿ ಸೆಪ್ಟೆಂಬರ್ 16 ರಿಂದ ಜೈಲಿನಲ್ಲಿರುವ ರಾಗಿಣಿ ದ್ವಿವೇದಿಗೆ ಇಂದು ನಡೆಯಲಿರುವ ಅರ್ಜಿ ವಿಚಾರಣೆ ಮಹತ್ವದಾಗಿದೆ.

Comments

Leave a Reply

Your email address will not be published. Required fields are marked *