ಮೈಸೂರು ಮೃಗಾಲಯದಲ್ಲಿ ದುರಂತ – ಎತ್ತಿ ಕೆಳಕ್ಕೆ ಹಾಕಿ ತುಳಿದು ಮಾವುತನನ್ನೇ ಕೊಂದ ಆನೆ

ಮೈಸೂರು: ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ಶುಕ್ರವಾರ ನಡೆದಿದೆ.

ಹರೀಶ್ (38) ಮೃತಪಟ್ಟ ಮಾವುತ. ಅಭಿ ಹೆಸರಿನ ಆನೆಗೆ ಮಧ್ಯಾಹ್ನ ಹರೀಶ್‌ ಅವರು ಹುಲ್ಲು ಹಾಕಿದ್ದಾರೆ. ಮೈದಡವಿ ಹುಲ್ಲು ಹಾಕುವ ಸಂದರ್ಭದಲ್ಲಿ ಹರೀಶ್‌ ಅವರನ್ನು ಸೊಂಡಿಲಿನಿಂದ ಎತ್ತಿ ಕೆಳಕ್ಕೆ ಹಾಕಿ ತುಳಿದಿದೆ.

ಈ ವಿಚಾರ ತಿಳಿದ ಕೂಡಲೇ ಅಲ್ಲಿದ್ದ ಸಿಬ್ಬಂದಿ ಹರೀಶ್‌ ಅವರನ್ನು ಆನೆಯಿಂದ ಬಿಡಿಸಿಕೊಂಡು ಕೂಡಲೇ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹರೀಶ್‌ ಮೃತಪಟ್ಟಿದ್ದಾರೆ.

ಹರೀಶ್​ ಮೈಸೂರಿನ ಲಲಿತಾದ್ರಿಪುರ ಗ್ರಾಮದ ನಿವಾಸಿಯಾಗಿದ್ದು, ಗುತ್ತಿಗೆ ನೌಕರನಾಗಿ ಮೃಗಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಐದು ದಿನಗಳಿಂದ ರಜೆ ಮೇಲೆ ತೆರಳಿದ್ದ ಹರೀಶ್ ಶುಕ್ರವಾರ ಕೆಲಸಕ್ಕೆ ಹಾಜರಾಗಿದ್ದರು. ಘಟನೆ ಸಂಬಂಧ ನಜರ್‌ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *