ಮೋದಿ ಸಂಕಲ್ಪ ಇಂದು ಅವರನ್ನು ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ: ಚೌಹಾಣ್

ಭೋಪಾಲ್: ಅಯೋಧ್ಯೆಯಲ್ಲಿ ಇಂದು ಭೂಮಿ ಪೂಜೆ ನೆರವೇರಲಿದ್ದು, ಈ ಮೂಲಕ ಶತಕೋಟಿ ಭಾರತೀಯರ ಕನಸು ನನಸಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪ ಇಂದು ಅವರನ್ನು ಅತೀ ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಇಂದು ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಮೂಲಕ 500 ವರ್ಷಗಳ ಹಿಂದೆ ಪ್ರಾರಂಭವಾದ ‘ಮಹಾಯಾಗ’ ಇಂದು ಅಂತ್ಯಗೊಳ್ಳುತ್ತದೆ. ಒಟ್ಟಿನಲ್ಲಿ ತಮ್ಮ ಸಂಕಲ್ಪ ಇಂದು ನರೇಂದ್ರ ಮೋದಿಯವರನ್ನು ಅತೀ ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು.

ಜುಲೈ 25ರಂದು ಕೊರೊನಾ ಪಾಸಿಟಿವ್ ಬಂದು ಭೋಪಾಲ್‍ನ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. 9 ದಿನಗಳ ಬಳಿಕ ಕೊರೊನಾ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಮತ್ತೆ ಪಾಸಿಟಿವ್ ಎಂದು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದು, ಇಂದು ಡಿಸ್ಚಾರ್ಜ್ ಆಗಿದ್ದಾರೆ.

Comments

Leave a Reply

Your email address will not be published. Required fields are marked *