ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳಗೆ ಕೊರೊನಾ ಪಾಸಿಟಿವ್

-ಅಭಿಮಾನಿಗಳಿಂದ ಉರುಳು ಸೇವೆ, ಉಪವಾಸ ವೃತ

ಯಾದಗಿರಿ: ಜಿಲ್ಲೆಯಲ್ಲಿ ಪ್ರವಾಹದ ಭೀತಿ ನಡುವೆಯೆ ಕೊರೊನಾ ಆರ್ಭಟ ಮುಂದುವರಿದಿದೆ. ಈಗ ಯಾದಗಿರಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಕೊರೊನಾ ಧೃಡಪಟ್ಟಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಆಗಸ್ಟ್ 15 ರಂದು ಧ್ವಜಾರೋಹಣ ಕಾರ್ಯಕ್ರಮ ಬಳಿಕ, ಶಾಸಕರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಸದ್ಯ ವರದಿ ಬಂದಿದ್ದು ಶಾಸಕರಿಗೆ ಕೊರೊನಾ ಸೋಂಕು ತಗುಲಿರೋದು ಧೃಡಪಟ್ಟಿದೆ. ಶಾಸಕ ವೆಂಕಟರೆಡ್ಡಿ ಮುದ್ನಾಳರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಅಪಾರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಶಾಸಕರು ಆದಷ್ಟು ಬೇಗ ಗುಣಮುಖರಾಗಲೆಂದು ಅವರ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜೊತೆ ಉರುಳು ಸೇವೆ ಸಲ್ಲಿಸುವ ಮೂಲಕ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಯಾದಗಿರಿ ನಗರದ ಅವರ ಅಭಿಮಾನಿ ಮತ್ತು ಎಬಿವಿಪಿ ಜಿಲ್ಲಾಧ್ಯಕ್ಷ ಭೀಮು ಪೂಜಾರಿ ಎಂಬ ಯುವಕ ಐದು ದಿನ ಉಪವಾಸ ಸಹ ಕೈಗೊಂಡಿದ್ದಾರೆ.

Comments

Leave a Reply

Your email address will not be published. Required fields are marked *