ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದ ಬಿ. ಯಶಸ್ವಿನಿ 2019ನೇ ಸಾಲಿನ ಯುಪಿಎಸ್ಸಿ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್)ಪರೀಕ್ಷೆಯಲ್ಲಿ ದೇಶಕ್ಕೆ 71ನೇ ಸ್ಥಾನ ಪಡೆದಿದ್ದಾರೆ.
ತಾಲೂಕಿನ ಗುಬ್ಬಿಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿರೋ ಬಿ.ಎಸ್.ಬಸವರಾಜಪ್ಪ ಅವರ ಪುತ್ರಿ ಯಶಸ್ವಿನಿ ಬಾಣೂರು ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ನಂತರ ಕಡೂರಿನ ದೀಕ್ಷಾ ವಿದ್ಯಾ ಮಂದಿರದಲ್ಲಿ ಪ್ರೌಢ ಶಿಕ್ಷಣ ಮುಗಿಸಿದರು. ಶಿವಮೊಗ್ಗದಲ್ಲಿ ಪದವಿ ಪೂರ್ವ ಶಿಕ್ಷಣ ನಂತರ ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

ದೆಹಲಿಯ ವಾಜೀರಾಂ ಅಂಡ್ ರವಿ ಇನ್ಸ್ ಟಿಟ್ಯೂಟ್ನಲ್ಲಿ ತರಬೇತಿ ಪಡೆದ ಯಶಸ್ವಿನಿ ಪ್ರಸ್ತುತ ಐಡಿಇಎಸ್ (ಇಂಡಿಯನ್ ಡಿಫೆನ್ಸ್ ಎಸ್ಟೇಟ್ ಸರ್ವೀಸ್) ನಲ್ಲಿ ಉದ್ಯೋಗ ತರಬೇತಿಯಲ್ಲಿದ್ದಾರೆ. ಕಳೆದ ಬಾರಿಯೂ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದ ಯಶಸ್ವಿನಿ 293ನೇ ಶ್ರೇಣಿ ಪಡೆದಿದ್ದರು. ಈ ವರ್ಷ 71ನೇ ಶ್ರೇಣಿ ಪಡೆದಿದ್ದಾರೆ. ಯಶಸ್ವಿನಿ ಚಿಕ್ಕಂದಿನಿಂದಲೂ ಓದಿನಲ್ಲಿ ಮುಂದು. ಐಎಎಸ್ ಅಧಿಕಾರಿ ಆಗಬೇಕೆನ್ನುವುದು ಅವರ ಬಯಕೆ-ಕನಸು. ಆ ನಿಟ್ಟಿನಲ್ಲಿ ಕಳೆದ ಬಾರಿ 293ನೇ ರ್ಯಾಂಕ್ ಪಡೆದರೂ ಅದು ಕಡಿಮೆ ಎನ್ನಿಸಿ ಮತ್ತೆ ಯುಪಿಎಸ್ಸಿ ಪರೀಕ್ಷೆ ಎದುರಿಸಿ 71 ನೇ ರ್ಯಾಂಕ್ ಪಡೆದಿದ್ದಾರೆ.
ಯುಪಿಎಸ್ಸಿ ಪರೀಕ್ಷೆಯಲ್ಲಿ ಚಿಕ್ಕೋಡಿಯ ರೈತ, ಕಾರ್ಮಿಕ, ಅರಣ್ಯ ಸಿಬ್ಬಂದಿ ಮಕ್ಕಳ ಸಾಧನೆhttps://t.co/z2ivwroWSY#UPSC #Belagavi
— PublicTV (@publictvnews) August 4, 2020
ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಏನನ್ನ ಬೇಕದ್ರು ಸಾಧಿಸುತ್ತಾರೆ ಅನ್ನೋದಕ್ಕೆ ಯಶಸ್ವಿನಿ ಕಣ್ಣೆದುರಿನ ಸಾಕ್ಷಿಯಾಗಿದ್ದಾರೆ. ಪುತ್ರಿಯ ಸಾಧನೆ ಹೆಮ್ಮೆ ತಂದಿದೆ ಎಂದು ಯಶಸ್ವಿನಿ ತಂದೆ ಬಸವರಾಜಪ್ಪ ಹಾಗ ತಾಯಿ ಇಂದಿರಾ ಸಂತಸ ಹಂಚಿಕೊಂಡಿದ್ದಾರೆ. ಐಎಎಸ್ ಮಾಡಬೇಕೆನ್ನುವ ನನ್ನ ಗುರಿಗೆ ಸದಾ ಬೆನ್ನೆಲುಬಾಗಿ ನಿಂತ ನನ್ನ ತಂದೆ ಬಸವರಾಜಪ್ಪ ಮತ್ತು ತಾಯಿ ಇಂದಿರಾ ಹಾಗೂ ನಾನು ಓದಿದ ಶಾಲೆಯ ಶಿಕ್ಷಕರ ಮಾರ್ಗದರ್ಶನದಿಂದ ನನಗೆ ಈ ಸ್ಥಾನ ಸಿಕ್ಕಿದೆ. ಜನರ ಸೇವೆ ಮಾಡಬೇಕೆನ್ನುವ ನನ್ನ ಕನಸಿಗೆ ಬೆನ್ನೆಲುಬಾಗಿ ನಿಂತ ಎಲ್ಲರಿಗೂ ಯಶಸ್ವಿನಿ ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ಫೋಸಿಸ್ಗೆ ರಾಜೀನಾಮೆ, ಕನ್ನಡದಲ್ಲಿ UPSC ಪರೀಕ್ಷೆ – ಹಾಸನದ ಯುವಕನಿಗೆ 594ನೇ ರ್ಯಾಂಕ್ https://t.co/3ZhZesYIWp#UPSC #Exam #KannadaNews #Kannada #Hassana #civilservices
— PublicTV (@publictvnews) August 4, 2020

Leave a Reply