ರಮೇಶ್ ಜಾರಕಿಹೊಳಿ ಸಿ.ಡಿ. ಕೇಸ್ ತನಿಖೆಗೆ SIT

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ)ಕ್ಕೆ ಒಪ್ಪಿಸಲಾಗಿದೆ. ಐಜಿಪಿ ಸೌಮೇಂದು ಮುಖರ್ಜಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಎಸ್‍ಐಟಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿ.ಡಿ. ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪತ್ರ ಬರೆದಿದ್ದು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ವಿಶೇಷ ತನಿಖಾ ತಂಡವನ್ನು ರಚಿಸಿ ಅದರ ನೇತೃತ್ವವನ್ನು ಸೌಮೇಂದು ಮುಖರ್ಜಿ ಅವರಿಗೆ ನೀಡಲಾಗಿದೆ. ಎಸ್‍ಐಟಿ ತಂಡ ವಿಚಾರಣೆ ನಡೆಸಿ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಬೊಮ್ಮಾಯಿ ಅವರು ಸೂಚಿಸಿದ್ದಾರೆ.

 

ಬೊಮ್ಮಾಯಿ ಪತ್ರದಲ್ಲೇನಿದೆ.?
ದಿನಾಂಕ 9-3-2021 ರಂದು ಮಾಜಿ ಮಂತ್ರಿಗಳಾದ ಶ್ರೀ ರಮೇಶ್ ಲ ಜಾರಕಿಹೊಳಿರವರು ನನಗೆ ಪತ್ರ ಬರೆದು, ಅವರ ವಿರುದ್ಧ ದಿನಾಂಕ 2-3-2021ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಂದು ಅರ್ಜಿ ನೀಡಿದ್ದು, ಅದರಲ್ಲಿ ಅವರ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವಂಥದ್ದು ಬಹಳ ಸ್ಪಷ್ಟವಾಗಿರುತ್ತದೆ ಎಂದು ತಿಳಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕುಶವಾಗಿ ವಿಚಾರಣೆ ಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಹಾಗೂ ಅದರ ನೇತೃತ್ವವನ್ನು ಶ್ರೀ ಸೌಮೇಂದು ಮುಖರ್ಜಿ, ಐಜಿಪಿ ಇವರಿಗೆ ವಹಿಸುವುದು ಮತ್ತು ಈ ಬಗ್ಗೆ ಸಂಪೂರ್ಣ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ನೀಡುವಂತೆ ಸೂಚಿಸಿದೆ.

Comments

Leave a Reply

Your email address will not be published. Required fields are marked *