ರಾಜ್ಯದಲ್ಲಿಂದು ಕೊರೊನಾ ಸ್ಫೋಟ- 7 ಸಾವಿರದ ಗಡಿ ದಾಟಿದ ಮಹಾಮಾರಿ

– ಬೆಂಗಳೂರಿನಲ್ಲಿ 2,665 ಪ್ರಕರಣಗಳು ಪತ್ತೆ
– ರಾಜ್ಯದಲ್ಲಿ ಇಂದು 5,006 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಮಹಾಮಾರಿ 7 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಇಂದು ಒಟ್ಟು 7,178 ಪ್ರಕಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1,72,102ಕ್ಕೆ ಏರಿಕೆಯಾಗಿದೆ.

ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ, ರಾಜ್ಯದಲ್ಲಿ ಇಂದು ಮಹಾಮಾರಿಗೆ 93 ಜನ ಬಲಿಯಾಗಿದ್ದು, ಈ ವರೆಗೆ 3,091 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 5,006 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 89,238 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,72,102 ಸೋಂಕಿತರ ಪೈಕಿ 79,765 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 683 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು 22,310 ರ್ಯಾಪಿಡ್ ಟೆಸ್ಟ್ ನಲ್ಲಿ 21,573 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 43,883 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 3,36,047 ಮಂದಿಗೆ ರ್ಯಾಪಿಡ್ ಟೆಸ್ಟ್, 13,32,464 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಕರ್ನಾಟಕದಲ್ಲಿ ಒಟ್ಟು 16,68,511 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು 2,665 ಮಂದಿಗೆ ಸೋಂಕು ದೃಢವಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72,237ಕ್ಕೆ ಏರಿಕೆ ಆಗಿದೆ. ಬೆಂಗಳೂರು ನಗರ 2,665, ಬಳ್ಳಾರಿ 607, ಉಡುಪಿ 313, ಬೆಳಗಾವಿ 302, ರಾಯಚೂರು 295, ಕಲಬುರಗಿ 261, ಧಾರವಾಡ 261 ಹಾಗೂ ಯಾದಗಿರಿಯಲ್ಲಿ 200 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಒಟ್ಟು 8 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಬೆಂಗಳೂರು ನಗರ 2,665 ಬಳ್ಳಾರಿ 607, ಉಡುಪಿ 313, ಬೆಳಗಾವಿ 302, ರಾಯಚೂರು 295, ಕಲಬುರಗಿ, 261, ಧಾರವಾಡ 261, ಯಾದಗಿರಿ, 200, ದಕ್ಷಿಣ ಕನ್ನಡ 194, ತುಮಕೂರು 177, ಕೊಪ್ಪಳ 163, ಕೊಪ್ಪಳ 163, ಬಾಗಲಕೋಟೆ 149, ವಿಜಯಪುರ 143, ಮೈಸೂರು 138, ಹಾಸನ 133, ದಾವಣಗೆರೆ 132, ಉತ್ತರ ಕನ್ನಡ 117, ಮಂಡ್ಯ 101, ಹಾವೇರಿ 95, ಗದಗ 94, ರಾಮನಗರ 93, ಚಿಕ್ಕಮಗಳೂರು 89, ಶಿವಮೊಗ್ಗ 73, ಬೆಂಗಳೂರು ಗ್ರಾಮಾಂತರ 66, ಚಿಕ್ಕಬಳ್ಳಾಪುರ 66, ಚಿತ್ರದುರ್ಗ 63, ಚಾಮರಾಜನಗರ 62, ಕೋಲಾರ 57, ಬೀದರ್ 47, ಕೊಡಗು 22 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

Comments

Leave a Reply

Your email address will not be published. Required fields are marked *