ರಾಜ್ಯದಲ್ಲಿ ಇವತ್ತು ಕೊರೊನಾ ಸ್ಫೋಟ- ಒಂದೇ ದಿನ 6,805 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಇವತ್ತು ಮಹಾಸ್ಫೋಟವಾಗಿದ್ದು, ಒಂದೇ ದಿನ 6,805 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿಂದು 93 ಜನರು ಸಾವನ್ನಪ್ಪಿದ್ದು, ಮರಣ ಪ್ರಮಾಣ ಶೇ.1.83ರಷ್ಟಿದೆ.

ಇಂದು ಆಸ್ಪತ್ರೆಯಿಂದ 5,602 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಚೇತರಿಕೆ ಪ್ರಮಾಣ ಶೇ. 50.73 ರಷ್ಟಿದೆ. 1,58,254 ಸಕ್ರಿಯ ಪ್ರಕರಣಗಳಿದ್ದು, 671 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು 48,421 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಇದುವರೆಗೂ ರಾಜ್ಯದಲ್ಲಿ 15,81,075 ಜನರು ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ಇಂದು 2,544 ಮಂದಿಗೆ ಸೋಂಕು ತಗುಲಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 2544, ಬಳ್ಳಾರಿ 431, ಮೈಸೂರು 361, ಶಿವಮೊಗ್ಗ 292, ಬೆಳಗಾವಿ 229, ಉಡುಪಿ 217, ಧಾರವಾಡ 212, ದಾವಣಗೆರೆ 197, ಕಲಬುರಗಿ 196, ರಾಯಚೂರು 181, ದಕ್ಷಿಣ ಕನ್ನಡ 173, ಬಾಗಲಕೋಟೆ 168, ತುಮಕೂರು 160, ಹಾಸನ 158, ಮಂಡ್ಯ 134, ಕೊಪ್ಪಳ 132, ಗದಗ 124, ಚಿಕ್ಕಬಳ್ಳಾಪುರ 117, ಕೋಲಾರ 107, ಬೀದರ್ 98, ಚಾಮರಾಜನಗರ 95, ಉತ್ತರ ಕನ್ನಡ 77, ಹಾವೇರಿ 64, ಚಿಕ್ಕಮಗಳೂರು 59, ವಿಜಯಪುರ 58, ಚಿತ್ರದುರ್ಗ 58, ಕೊಡಗು 51, ರಾಮನಗರ 41, ಯಾದಗಿರಿ 37 ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ 34 ಪ್ರಕರಣಗಳು ವರದಿಯಾಗಿವೆ

Comments

Leave a Reply

Your email address will not be published. Required fields are marked *