ರಾಜ್ಯದಲ್ಲಿ ಮುಂಗಾರು ಪ್ರಾರಂಭ – ಡಿಸಿಗಳ ಜೊತೆ ಸಿಎಂ ಸಭೆ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಆಗಮನ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಜಿಲ್ಲೆಗಳಲ್ಲಿ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ನಾಳೆ ಸಭೆ ನಡೆಸುತ್ತಿದ್ದಾರೆ. ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗದ 20 ಜಿಲ್ಲೆಗಳ ಡಿಸಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲಾಡಳಿತಗಳ ಜೊತೆ ಮುಂಗಾರು ಸಿದ್ಧತೆ, ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಡಿಸಿಗಳ ಸಭೆಯಲ್ಲಿ ಚರ್ಚೆ ನಡೆಯಲಿದ್ದಾರೆ. ಇದನ್ನೂ ಓದಿ: ಸೋಯಾ ಬೀಜ ಸಿಗದಿದ್ದಕ್ಕೆ ಕೃಷಿ ಅಧಿಕಾರಿಯನ್ನು ಗೇಟಿಗೆ ಕಟ್ಟಿ ಹಾಕಿದ ರೈತರು

ಇಂದೂ ಕೂಡ ಸಿಎಂ ಮುಂಗಾರು ಕುರಿತ ಅಧಿಕಾರಿಗಳ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಗಾರು ಪ್ರಾರಂಭ ಆಗಿದೆ. ಉತ್ತಮವಾಗಿ ಮಳೆ ಆಗುತ್ತಿದೆ. ರೈತರು ಕೂಡ ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿತ್ತನೆಗೆ ಬೇಕಾದ ಬೀಜಗಳು, ಗೊಬ್ಬರ ಯಾವುದಕ್ಕೂ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಅಂತ ಸ್ಪಷ್ಟಪಡಿಸಿದರು.

Comments

Leave a Reply

Your email address will not be published. Required fields are marked *