ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ – ರಣ ಮಳೆಗೆ ತತ್ತರಿಸಿದ ಮಂಗಳೂರು, ಚಾಮರಾಜನಗರ

ಮಂಗಳೂರು/ಚಾಮರಾಜನಗರ: ರಾಜ್ಯದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಣ ಮಳೆಗೆ ಮಂಗಳೂರು, ಚಾಮರಾಜನಗರ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಸುರಿದಿದೆ. ತಡ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ತಗ್ಗು ಪ್ರದೇಶಗಳಿಗೆ  ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇದನ್ನೂ ಓದಿ: ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್

rain

ನಗರದ ಅಳಕೆ, ಕುದ್ರೋಳಿ ಸೇರಿದಂತೆ ಹಲವು ತಗ್ಗು ಪ್ರದೇಶದಲ್ಲಿನ ರಸ್ತೆಗಳು ಕೆರೆಯಂತಾಗಿದೆ. ಇನ್ನು ಮಳೆಯಿಂದಾಗಿ ಜಿಲ್ಲೆಯಲ್ಲಿನ ನದಿಗಳು ಮೈದುಂಬಿ ಹರಿದಿವೆ. ಧರ್ಮಸ್ಥಳ ಬಳಿ ಹೊಳೆಯ ನೀರು ರಸ್ತೆಗೆ ಬಂದು ವಾಹನ ಸವಾರರಿಗೆ ತೊಂದರೆಯುಂಟಾಗಿದೆ. ಭಾರೀ ನೀರಿನ ಹರಿವು ಹಿನ್ನಲೆ ಉಜಿರೆ-ಧರ್ಮಸ್ಥಳ ವಾಹನ ಸಂಚಾರ ಕೆಲಕಾಲ ಸ್ಥಗಿತವಾಗಿತ್ತು. ಇಂದು ಹಾಗೂ ಇನ್ನೂ 2 ದಿನ ಕೂಡ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜನ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: ಚಿರು ನನ್ನ ಜೀವನ, ನನ್ನ ಬೆಳಕು: ಮೇಘನಾ ರಾಜ್

rain

ಮತ್ತೊಂದೆಡೆ ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಸತತ ಮಳೆ ಸುರಿದಿದೆ. ಯಳಂದೂರು ತಾಲೂಕಿನ ಬಿಳಿಗಿರಿರಂಗ ಬೆಟ್ಟದಲ್ಲಿ ಮಳೆ ನೀರು ರಸ್ತೆಯಲ್ಲೇ ಉಕ್ಕಿ ಹರಿದಿದೆ. ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.

Comments

Leave a Reply

Your email address will not be published. Required fields are marked *