ರಾಮ ಮಂದಿರ ನಿರ್ಮಾಣಕ್ಕೆ ದಿಗ್ವಿಜಯ್ ಸಿಂಗ್ ದೇಣಿಗೆ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. 1,11,111 ರೂ. ಮೌಲ್ಯದ ಚೆಕ್ ನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಲ್ಲಿ ನೀಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದಿಗ್ವಿಜಯ್ ಸಿಂಗ್, ರಾಮ ಮಂದಿರ ನಿರ್ಮಾಣಕ್ಕೆ ಪಡೆಯುವ ದೇಣಿಗೆ ಸೌಹಾರ್ದಯುತವಾಗಿ ರಲಿ. ಈ ಹಿಂದೆ ದೇಣಿಗೆ ಪಡೆದುಕೊಂಡಿರುವ ವಿಶ್ವ ಹಿಂದೂ ಪರಿಷತ್ ಹಣಕಾಸಿನ ಮಾಹಿತಿಯನ್ನ ಜನರ ಮುಂದಿಡಲಿ ಎಂದು ಬರೆದಿದ್ದಾರೆ.

ಕೆಲ ದಿನಗಳ ಹಿಂದೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯರಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ತನಾಥ್ ಸೇರಿದಂತೆ ಹಲವು ಮುಖಂಡರು ರಾಮ ಮಂದಿರಕ್ಕಾಗಿ ದೇಣಿಗೆ ನೀಡಿದ್ದಾರೆ. ದೇಶದ ಜನತೆ ಸಹ ತಮ್ಮ ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ಮಂದಿರ ನಿರ್ಮಾಣದ ಧಾರ್ಮಿಕ ಕಾರ್ಯಕ್ಕೆ ಕೈ ಜೋಡಿಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *