ರಾಯಚೂರಿನಲ್ಲಿ ಪ್ರತ್ಯೇಕ ಅಪಘಾತ- ನಾಲ್ವರು ಸಾವು

–  ಸ್ಟೇರಿಂಗ್ ಕಿತ್ತು ಬಂದಿದ್ದಕ್ಕೆ ಅಪಘಾತ

ರಾಯಚೂರು: ಜಿಲ್ಲೆಯ ದೇವದುರ್ಗದ ಮುಷ್ಟೂರು ಕ್ರಾಸ್ ಬಳಿ ಕ್ರೂಸರ್ ಸ್ಟೇರಿಂಗ್ ಕಿತ್ತು ಬಂದಿದ್ದರಿಂದ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಶಬ್ಬೀರ್ (50 ), ಖಾಜಾ ಸಾಬ್( 65) ಮೃತ ದುರ್ದೈವಿಗಳು. ಹನುಮಂತ, ಖಾಜಾ ಬೀ ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರಾಮದುರ್ಗದಿಂದ ಶಾಖಪುರಕ್ಕೆ ಮದುವೆಗೆ ಹೊರಟಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ.

ಸಿರವಾರ ತಾಲೂಕಿನ ಕಲ್ಲೂರು ಬಳಿ ಸ್ಟೇರಿಂಗ್ ತುಂಡಾಗಿ ಮಿನಿಲಾರಿ ಪಲ್ಟಿಯಾಗಿದ್ದರಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನ ಕೊಪ್ಪಳದ ಕಾರಟಗಿ ಮೂಲದ ಸುರೇಶ್ (36) ಹಾಗು ಮರಿಯಾ (25) ಅಂತ ಗುರುತಿಸಲಾಗಿದೆ.

ಕಾರಟಗಿಯಿಂದ ರಾಯಚೂರಿಗೆ ಭತ್ತ ಕಟಾವು ಮಾಡುವ ಯಂತ್ರವನ್ನ ಹೊತ್ತು ತರುತ್ತಿದ್ದ ವೇಳೆ ಮಿನಿ ಲಾರಿ ಪಲ್ಟಿಯಾಗಿದೆ. ಸ್ಟೇರಿಂಗ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣಕ್ಕೆ ಸಿಗದೆ ಲಾರಿ ಪಲ್ಟಿ ಹೊಡೆದಿದೆ. ಅಪಘಾತವಾದ ಹಿನ್ನೆಲೆ ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ರಸ್ತೆ ಮೇಲೆ ಬಿದ್ದ ಮಿನಿ ಲಾರಿಯನ್ನು ಕ್ರೇನ್ ಮೂಲಕ ತೆರವು ಮಾಡಲಾಗಿದೆ. ಘಟನೆ ಹಿನ್ನೆಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *