ರಾಯಚೂರಿನಲ್ಲಿ ಸಿಡಿಲು ಬಡಿದು ಅಣ್ಣ ತಮ್ಮ ಸಾವು

ರಾಯಚೂರು: ತಾಲೂಕಿನ ಸಿಂಗನೋಡಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

ರವಿಚಂದ್ರ(23), ವಿಷ್ಣು (18) ಸಿಡಿಲು ಬಡಿದು ಪ್ರಾಣಬಿಟ್ಟಿರುವ ಸಹೋದರರು. ಜಮೀನಿನಲ್ಲಿರುವ ಗುಡಿಸಲು ಬಳಿ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರೂ ಸಾವನ್ನಪ್ಪಿದ್ದಾರೆ. ತಾಯಿಗೆ ಸಣ್ಣಪುಟ್ಟ ಗಾಯಗಳಾಗಿವೆ, ತಂದೆ ಸಿಡಿಲಿನಿಂದ ಬಚಾವಾಗಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಳೆ ಬಂದಿದೆ. ಆಗ ಕುಟುಂಬದ ನಾಲ್ಕು ಜನ ಗುಡಿಸಿಲಿನಲ್ಲೆ ಉಳಿದಿದ್ದರು. ಆದರೆ ದುರಾದೃಷ್ಟವಶಾತ್ ಇವರಿಬ್ಬರು ಸಾವನ್ನಪ್ಪಿದ್ದಾರೆ. ತಾಯಿ ಮಹಾದೇವಿಗೆ ಸಣ್ಣಪುಟ್ಟ ಗಾಯಗಳಾಗಿವೆ, ತಂದೆ ಗೋವಿಂದ ಸಿಡಿಲಿನಿಂದ ಪಾರಾಗಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಮೃತರ ಶವಗಳನ್ನ ಮರಣೋತ್ತರ ಪರೀಕ್ಷೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Comments

Leave a Reply

Your email address will not be published. Required fields are marked *