ರೆಸ್ಟ್‌ಗಾಗಿ ಆಸ್ಪತ್ರೆ ಸೇರಿಕೊಳ್ಳಲಿ: ಡಿಕೆಶಿಗೆ ಸಂತೋಷ್ ಟಾಂಗ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಟಾಂಗ್ ನೀಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಇಂದು ಡಿಸ್ಚಾರ್ಜ್ ಆಗಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಪುಪಿರೋ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಡಿಕೆಶಿ ವಿರುದ್ಧ ಕಿಡಿಕಾರಿದರು. ಸುಖಾಸುಮ್ಮನೆ ಆರೋಪ ಮಾಡಿರುವ ಡಿಕೆಶಿ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಅವರು ಸೋತಿದಕ್ಕೆ ಈ ರೀತಿಯ ಹೇಳಿಕೆ ಕೊಡ್ತಾ ಇದ್ದಾರೆ. ಇದು ಮೊದಲ ಬಾರಿಗೆ ಈ ಆರೋಪ ಅಲ್ಲ. ತನಿಖಾ ಸಂಸ್ಥೆ ದಾಳಿ ಮಾಡಿದಾಗಲೂ ಇದೇ ರೀತಿ ಆರೋಪ ಮಾಡುತ್ತಾರೆ. ಡಿಕೆಶಿ ಅವರಿಗೆ ರೆಸ್ಟ್ ಕೊಟ್ಟು ಒಂದು ತಿಂಗಳು ಆಸ್ಪತ್ರೆಗೆ ಸೇರಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ನಿದ್ರೆ ಬರದೆ ಇದ್ದಾಗ ಮಾತ್ರೆ ತೆಗೆದುಕೊಳ್ಳುತ್ತಾ ಇದ್ದೆ. ಈ ಮಾತ್ರೆಯಲ್ಲಿ ಬದಲಾವಣೆ ಆಗಿದ್ದರಿಂದ ಈ ರೀತಿ ಆಗೋಯ್ತು ಎಂದು ಸಂತೋಷ್ ಸ್ಪಷ್ಟಪಡಿಸಿದರು. ಇನ್ನು ಬಿಎಸ್‍ವೈ ಅವರ ಬಗ್ಗೆ ಮಾತನಾಡಬೇಡಿ. ನಾನು ಗಟ್ಟಿಯಾಗಿದ್ದೀನಿ ನನಗೆ ಯಾವುದೇ ತೊಂದರೆ ಆಗಿಲ್ಲ. ನಾನು ಮಾನಸಿಕವಾಗಿ ದೃಢವಾಗಿ ಇದ್ದೀನಿ. ಇನ್ನೆರಡು ದಿನ ಬಿಟ್ಟು ಯಡಿಯೂರಪ್ಪ ಅವರನ್ನು ಭೇಟಿ ಮಾಡ್ತೀನಿ ಎಂದರು. ಇದನ್ನೂ ಓದಿ: ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಲುಪಿರುವ ಮಾಹಿತಿ ಇತ್ತು: ಡಿಕೆಶಿ

Comments

Leave a Reply

Your email address will not be published. Required fields are marked *