ರೈತನ ಮಗ ಕುಮಾರಸ್ವಾಮಿಯನ್ನು ಟೀಕಿಸೋದು ಸರಿಯಲ್ಲ: ಪ್ರತಾಪ್ ಸಿಂಹ

ಮೈಸೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಒಬ್ಬ ರೈತನ ಮಗ. ಅವರನ್ನು ಟೀಕೆ ಮಾಡುವುದು ಸರಿಯಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪರಿಷತ್‍ನಲ್ಲಿ ಬಿಜೆಪಿ ಕಾಯ್ದೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಸಂಸದರು ಪ್ರತಿಕ್ರಿಯಿಸಿದರು. ಈ ವೇಳೆ ಅವರು ಮಾಜಿ ಸಿಎಂ ಪರ ಬ್ಯಾಟಿಂಗ್ ಮಾಡಿದರು. ಇದನ್ನೂ ಓದಿ: ಯುವಕರನ್ನು ಕೃಷಿಯತ್ತ ಆಕರ್ಷಿಸಲು ಭೂಸುಧಾರಣಾ ತಿದ್ದುಪಡಿ ಕಾಯ್ದೆ ಸಹಾಯಕ – ಎಚ್‌ಡಿಕೆ

ಬಿಜೆಪಿಯ ಒಳ್ಳೆಯ ಕೆಲಸವನ್ನು ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ಅವರನ್ನು ರಾಜಕೀಯ ಕಾರಣಕ್ಕೆ ಟೀಕಿಸುವುದು ಸಣ್ಣತನ. ಕುಮಾರಸ್ವಾಮಿ 20 – 20 ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ರೈತಪರ ಕಾರ್ಯಕ್ರಮ ನೀಡಿದ್ದಾರೆ ಎಂದರು. ಇದನ್ನೂ ಓದಿ: ಬಿಎಸ್‍ವೈ ಜೊತೆ ಎಚ್‍ಡಿಕೆ ಡೀಲ್, ಜೆಡಿಎಸ್ ಮಣ್ಣಿನ ಪಕ್ಷವಲ್ಲ – ಕೋಡಿಹಳ್ಳಿ ಚಂದ್ರಶೇಖರ್

ಕುಮಾರಸ್ವಾಮಿ ಒಬ್ಬ ರೈತನ ಮಗ. ಹೀಗಾಗಿ ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿಯ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ ಎಂದು ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಮಾತನಾಡಿದ್ದಾರೆ. ಇದನ್ನೂ ಓದಿ: ಡೋಂಗಿ ರೈತ ಮುಖಂಡರಿಗೆ ಉತ್ತರಿಸಬೇಕಿಲ್ಲ- ಕೋಡಿಹಳ್ಳಿಗೆ ಎಚ್‍ಡಿಕೆ ತಿರುಗೇಟು

Comments

Leave a Reply

Your email address will not be published. Required fields are marked *