ರೈಲು ಡಿಕ್ಕಿಯೊಡೆದು ಆನೆ ಸಾವು: ತಪ್ಪಿದ ಅನಾಹುತ

ಹಾಸನ: ರೈಲಿಗೆ ಸಿಲುಕಿ ಕಾಡಾನೆ ಸಾವನ್ನಪ್ಪಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಬಾಳ್ಳುಪೇಟೆ ಬಳಿ ನಡೆದಿದೆ.

ಬೆಂಗಳೂರು-ಕಾರವಾರ ಮಾರ್ಗದಲ್ಲಿ ಚಲಿಸುತ್ತಿದ್ದ ರೈಲಿಗೆ ಒಂಟಿ ಸಲಗ ಸಿಲುಕಿದೆ. ರೈಲು ಡಿಕ್ಕಿಯೊಡೆದ ರಭಸಕ್ಕೆ ಸಾವನ್ನಪ್ಪಿದ ಒಂಟಿಸಲಗ, ರೈಲ್ವೆ ಹಳಿಯ ಮೇಲೆ ಬಿದ್ದಿದೆ. ಇದ್ರಿಂದ ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲು ಸ್ಥಳದಲ್ಲೇ ನಿಲ್ಲುವಂತಾಗಿತ್ತು.

 

ಸ್ಥಳಕ್ಕೆ ರೈಲ್ವೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಮಲೆನಾಡು ಭಾಗದಲ್ಲಿ ಕಾಡಾನೆ ಸಂತತಿ ಹೆಚ್ಚಿದ್ದು, ಗುಂಪಿನಿಂದ ಬೇರ್ಪಟ್ಟಿದ್ದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿತ್ತು. ಇದೀಗ ಅದೇ ಆನೆ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

Comments

Leave a Reply

Your email address will not be published. Required fields are marked *