ಲಂಚ ಪಡೆಯುತ್ತಿರುವಾಗ ACB ಬಲೆಗೆ ಬಿದ್ದ ಯಾದಗಿರಿ DHO

ಯಾದಗಿರಿ: ಸ್ಟಾಫ್ ನರ್ಸ್ ನೇಮಕಾತಿ ವೇಳೆಯಲ್ಲಿ ಅಭ್ಯರ್ಥಿಯೊಬ್ಬರಿಂದ 30 ಸಾವಿರ ಲಂಚ ಪಡೆಯುತ್ತಿರುವಾಗ ಯಾದಗಿರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಸದ್ಯ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಆರೋಗ್ಯ ಇಲಾಖೆಯ ಅಗತ್ಯ ಸಿಬ್ಬಂದಿಯ ಭರ್ತಿ ಕಾರ್ಯ ನಡೆಯುತ್ತಿತ್ತು. ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸ್.ಎಂ. ಪಾಟೀಲ್ ಭರ್ತಿ ಕಾರ್ಯದ ಮುಖ್ಯಸ್ಥರಾಗಿದ್ದರು. ನೇಮಕಾತಿಗಾಗಿ ಒಬ್ಬೊಬ್ಬ ಅಭ್ಯರ್ಥಿಯಿಂದ 30 ರಿಂದ 50 ಸಾವಿರ ಲಂಚದ ಬೇಡಿಕೆ ಇಟ್ಟಿರುವ ಬಗ್ಗೆ ಎಸಿಬಿಗೆ ದೂರುಗಳು ಬಂದಿದ್ದಿವು.

ಈ ಬಗ್ಗೆ ಖಚಿತಪಡಿಸಿಕೊಂಡ ಎಸಿಬಿ ಅಧಿಕಾರಿಗಳು, ನೊಂದ ಅಭ್ಯರ್ಥಿಯನ್ನು ಬಳಸಿಕೊಂಡು ಡಿಹೆಚ್‍ಓ ಲಂಚ ಸ್ವೀಕರಿಸುವಾಗ ದಾಳಿ ಮಾಡಿದೆ. ಇನ್ನೂ ದಾಳಿಯ ಬಳಿಕ ಡಿಹೆಚ್‍ಓ ಮತ್ತು ಇತರೆ ಅಧಿಕಾರಿಗಳನ್ನು ಎಸಿಬಿ ಅಧಿಕಾರಿಗಳು ತೀವ್ರವಾಗಿ ವಿಚಾರಣೆ ನಡೆಸಿದ್ದಾರೆ. ಈ ದಾಳಿಯಲ್ಲಿ ಯಾದಗಿರಿ ಮತ್ತು ಕಲಬುರಗಿ ಎಸಿಬಿ ಅಧಿಕಾರಿಗಳು ಭಾಗಿಯಾಗಿದ್ದರು.

Comments

Leave a Reply

Your email address will not be published. Required fields are marked *