ಲಕ್ಷ ದ್ವೀಪದಿಂದ ಹಡಗಿನಲ್ಲಿ ಬಂದ ಮಂಗ್ಳೂರು ಕಾರ್ಮಿಕರು

– 19 ಮಂದಿಯನ್ನ ಸ್ವಾಗತಿಸಲು ಬಂದ ನೂರಾರು ರಾಜಕಾರಣಿಗಳು

ಮಂಗಳೂರು: ಕಡಲಾಚೆಯಲ್ಲಿ ಅತಂತ್ರರಾಗಿದ್ದ ಕಾರ್ಮಿಕರನ್ನ ರಕ್ಷಿಸುವಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಲಕ್ಷ ದ್ವೀಪದಲ್ಲಿ ಸಿಲುಕಿದ್ದ ಮೂರು ಮಹಿಳೆಯರು ಸೇರಿದಂತೆ 19 ಮಂದಿಯನ್ನ ಗುರುವಾರ ಅಮಿನ್ ದೀವಿ ಹೆಸರಿನ ನೌಕೆ ಮುಖಾಂತರ ಮಂಗಳೂರಿಗೆ ಕರೆ ತರಲಾಯಿತು. ಬಳಿಕ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು.

ನೌಕರರು ಬಂದಿಳಿಯುತ್ತಿದ್ದಂತೆ ಜನಪ್ರತಿನಿಧಿಗಳು ಕಾರ್ಮಿಕರ ರಕ್ಷಣೆಗೆ ಮುಗಿಬಿದ್ದಿದ್ದರು. ಸಾಮಾಜಿಕ ಅಂತರ ಮರೆತ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಕಾಂಗ್ರೆಸ್ ಎಂ.ಎಲ್.ಸಿ ಐವಾನ್ ಡಿಸೋಜಾ ಸ್ವಾಗತ ಕೋರಲು ನುಗ್ಗಾಟ ನಡೆಸಿದ್ದಾರೆ.

ಕೇವಲ 19 ಮಂದಿ ಕಾರ್ಮಿಕರ ಸ್ವಾಗತಕ್ಕೆ 300 ಮಂದಿ ಜಮಾಯಿಸಿದ್ದು, ಪ್ರಜ್ಞಾವಂತ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಂದಹಾಗೆ ವ್ಯಾಪಾರ, ಗುಜರಿ ಸಂಗ್ರಹ ಸೇರಿದಂತೆ ವಿವಿಧ ಕೆಲಸಕ್ಕಾಗಿ ತೆರಳಿದ್ದ ಈ ಕಾರ್ಮಿಕರೆಲ್ಲ ಲಕ್ಷ ದ್ವೀಪದ ಕಿಲ್ತಾನ್, ಕವರತ್ತಿ, ಅಗಟ್ಟಿ ದ್ವೀಪದಲ್ಲಿ ಸಿಲುಕಿದ್ದರು ಎನ್ನಲಾಗಿದೆ.

Comments

Leave a Reply

Your email address will not be published. Required fields are marked *