ಲಸಿಕೆ ಪಡೆಯಲು ಭಯಪಟ್ಟು ನದಿಗೆ ಹಾರಿದ ಗ್ರಾಮಸ್ಥರು

ಲಕ್ನೋ: ಕೊರೊನಾ ಲಸಿಕೆ ಕುರಿತಾಗಿ ತಪ್ಪು ಕಲ್ಪನೆ, ಭಯ ಹೊಂದಿರುವ ಗ್ರಾಮಸ್ಥರು ಲಸಿಕೆ ಹಾಕಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು, ಆರೋಗ್ಯ ಸಿಬ್ಬಂದಿಯ ಕೈಗೆ ಸಿಗದಂತೆ ತಮ್ಮ ಮನೆಗಳಿಂದ ಓಡಿಹೋಗಿ ನದಿಗೆ ಹಾರಿರುವುದು ಉತ್ತರಪ್ರದೇಶದ ಬಾರಬಂಕಿ ಜಿಲ್ಲೆಯ ಸಿಸೌಡಾ ಗ್ರಾಮದಲ್ಲಿ ನಡೆದಿದೆ.

 

ಸಾರ್ವಜನಿಕರಿಗೆ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿತ್ತು. ಈ ವೇಳೆ ಅಧಿಕಾರಿಗಳನ್ನು ಕಂಡ ಕೆಲವುಗ್ರಾಮಸ್ಥರು ಲಸಿಕೆ ತೆಗೆದುಕೊಳ್ಳಲು ನಿರಾಕರಿಸಿ ತಮ್ಮ ಮನೆಗಳಿಂದ ನದಿಯ ಕಡೆಗೆ ಓಡಿಹೋಗಿದ್ದಾರೆ. ಬಳಿಕ ಇವರನ್ನು ಆರೋಗ್ಯ ಅಧಿಕಾರಿಗಳು ಹಿಂಬಾಲಿಸಿದ್ದಾರೆ. 200ಕ್ಕೂ ಹೆಚ್ಚು ಜನರು ಆರೋಗ್ಯ ಸಿಬ್ಬಂದಿ ಕೈಯಿಂದ ತಪ್ಪಿಸಿಕೊಳ್ಳಲು ನದಿ ಕಡೆಗೆ ಓಡಿದ್ದಾರೆ. ಸಿಬ್ಬಂದಿ ಹಿಂಬಾಲಿಸಿ ಬಂದಿದ್ರಿಂದ ಅವರಲ್ಲಿ ಕೆಲವು ನೀರಿಗೆ ಹಾರಿದ್ದಾರೆ.

ಆರೋಗ್ಯಾಧಿಕಾರಿಗಳು ಎಷ್ಟೇ ಮನವಿ ಮಾಡಿಕೊಂಡರು ಸಹ ಗ್ರಾಮಸ್ಥರು ಲಸಿಕೆಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ನದಿಯಿಂದ ಹೊರಬನ್ನಿ ಎಂದು ಮನವಿ ಮಾಡಿದ್ದಾರೆ. ಇನ್ನು ಬಲವಂತ ಮಾಡಿ ಮುಂದೆ ಹೋದರೆ ಜನರು ನೀರಿನಲ್ಲಿ ಮುಳಗಬಹುದು ಎಂದು ಭಯದಿಂದ ಅಧಿಕಾರಿಗಳು ವಾಪಾಸ್ಸಾಗಿದ್ದಾರೆ. ಒಟ್ಟು 1500 ನಿವಾಸಿಗಳಿರುವ ಈ ಗ್ರಾಮದಲ್ಲಿ ಈವರೆಗೆ ಅಧಿಕಾರಿಗಳು ಕೇವಲ 14 ಮಂದಿಗೆ ಲಸಿಕೆ ಹಾಕಲು ಸಾಧ್ಯವಾಗಿಲ್ಲ.

 

ಜನರಲ್ಲಿ ಲಸಿಕೆ ಬಗ್ಗೆ ಅರಿವಿನ ಕೊರತೆ ಇದೆ. ಈ ಕುರಿತಾಗಿ ಜಾಗೃತಿ ಅಭಿಯಾನ ನಡೆಸಲಿದ್ದೇವೆ ಎಂದು ಬಾರಾಬಂಕಿ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *