ಲೈಂಗಿಕ ದೌರ್ಜನ್ಯ ವಿರೋಧಿಸಿದ ಬಾಲಕನ ಖಾಸಗಿ ಅಂಗವನ್ನೇ ಕತ್ತರಿಸಲೆತ್ನಿಸಿದ ಸಾಧು!

ಲಕ್ನೋ: ಆಶ್ರಮದಲ್ಲಿ ಸಾಧುವೊಬ್ಬ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಲ್ಲದೇ ಆತನ ಖಾಸಗಿ ಅಂಗವನ್ನು ಕತ್ತರಿಸಲು ಪ್ರಯತ್ನಿಸಿರುವ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಸಾಧುವನ್ನು ರಾಮ್ ಸೇವಕ್ ದಾಸ್ ಎಂದು ಗುರುತಿಸಲಾಗಿದೆ. ಬಾಲಕ ತನ್ನ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿದಾಗ ಸಾಧು ಆತನ ಖಾಸಗಿ ಅಂಗವನ್ನೇ ಕತ್ತರಿಸಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಾಲಕ ಹೇಗೋ ಮಾಡಿ ಸಾಧು ಕೈಯಿಂದ ತಪ್ಪಿಸಿಕೊಂಡಿದ್ದಾನೆ.

ಆಶ್ರಮವೊಂದರಲ್ಲಿ ಸಂಸ್ಕøತ ವಿದ್ಯಾರ್ಥಿಯಾಗಿರುವ ಬಾಲಕ ತನ್ನ ಸಂಬಂಧಿಕರೊಬ್ಬರ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾನೆ. ಈ ವೇಳೆ ಅವರು ಕೂಡಲೇ ಬಾಲಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಸಾಧು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ಪೊಲೀಸರು ಸಾಧುವನ್ನು ಬಂಧಿಸಿದ್ದಾರೆ.

ಸಾಧು ಬಾಲಕನನ್ನು ಆಶ್ರಮಕ್ಕೆ ಕರೆದು ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಆತನ ಮೇಲೆ ಒತ್ತಡ ಹಾಕಿದ್ದಾನೆ. ಬಾಲಕ ಇದನ್ನು ನಿರಾಕರಿಸಿದಾಗ ಸಾಧು ಆತನ ಖಾಸಗಿ ಅಂಗವನ್ನು ಕಟ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಗಾಯಗೊಂಡ ಬಾಲಕ, ಸಾಧು ಕೈಯಿಂದ ತಪ್ಪಿಸಿಕೊಂಡು ಪಾರಾಗಿದ್ದಾನೆ. ನಂತರ ಸಂಬಂಧಿಕರಿಗೆ ವಿಷಯ ತಿಳಿಸಿದ್ದಾನೆ. ಸದ್ಯ ಸಾಧುವನ್ನು ಬಂಧಿಸಲಾಗಿದ್ದು, ಪೊಲೀಸರು ಜೈಲಿಗಟ್ಟಿದ್ದಾರೆ.

Comments

Leave a Reply

Your email address will not be published. Required fields are marked *