ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ

ಮುಂಬೈ: ವಧು ಯಾಮಿ ಗೌತಮಿಯನ್ನ ರಾಧೆ ಮಾಗೆ ನಟ ವಿಕ್ರಾಂತ್ ಮೆಸ್ಸಿ ಹೋಲಿಕೆ ಮಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಕೆಂಡಾಮಂಡಲವಾಗಿದ್ದಾರೆ. ನಟನ ಕಮೆಂಟ್ ಗೆ ರಿಪ್ಲೈ ಮಾಡಿರುವ ಕಂಗನಾ, ನನ್ನ ಚಪ್ಪಲಿ ಕೊಡು ಎಂದು ಕಮೆಂಟ್ ಮಾಡಿದ್ದಾರೆ.

ಜೂನ್ 4ರಂದು ಯಾಮಿ ಹಿಮಾಚಲ ಪ್ರದೇಶದಲ್ಲಿ ಉರಿ ಚಿತ್ರದ ನಿರ್ದೇಶಕ, ರೈಟರ್ ಆದಿತ್ಯ ಅವರ ಜೊತೆ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ಕೊರೊನಾ ಹಿನ್ನೆಲೆ ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿತ್ತು. ಫೋಟೋಗಳು ವೈರಲ್ ಬಳಿಕ ಅಭಿಮಾನಿಗಳಿಗೆ ಮದುವೆ ವಿಷಯ ತಿಳಿದಿತ್ತು. ಅಭಿಮಾನಿಗಳು ಸೇರಿದಂತೆ ಸ್ಟಾರ್ ಗಳು ಸೋಶಿಯಲ್ ಮೀಡಿಯಾ ಮೂಲಕವೇ ನಟಿಗೆ ಮದುವೆ ವಿಷಯ ತಿಳಿಸಿದ್ದರು.

ಅದೇ ರೀತಿ ಕಂಗನಾ ರಣಾವತ್, ಹಿಮಾಚಲ ಪ್ರದೇಶದ ವಧು ಗಾರ್ಜಿಯಸ್ ಮತ್ತು ನೋಡಲು ದೇವಿಯ ರೀತಿಯಲ್ಲಿ ಕಾಣುತ್ತಿದ್ದಾರೆ ಎಂದು ಯಾಮಿ ಫೋಟೋಗೆ ಕಮೆಂಟ್ ಮಾಡಿದ್ದರು. ಇದೇ ಫೋಟೋಗೆ ವಿಕ್ರಾಂತ್ ಮೆಸ್ಸಿ, ಶುದ್ಧ ಮತ್ತು ಪವಿತ್ರ, ನೋಡಲು ಅಚ್ಚು ರಾಧೆ ಮಾ.. ಎಂದು ಬರೆದುಕೊಂಡಿದ್ದರು. ಈ ಕಮೆಂಟ್ ಗೆ ಪ್ರತಿಕ್ರಿಯಿಸಿರುವ ಕಂಗನಾ, ಎಲ್ಲಿಂದ ಬಂತು ಈ ಜಿರಳೆ, ನನ್ನ ಚಪ್ಪಲಿಯನ್ನ ಕೊಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಂಗನಾ ರಣಾವತ್ ಗನ್ ಮ್ಯಾನ್ ಮಂಡ್ಯದಲ್ಲಿ ಅರೆಸ್ಟ್

ರಾಧೆ ಮಾ ಸ್ವಯಂ ಘೋಷಿತ ದೇವತೆ. ಹಲವು ವಿವಾದಗಳಿಂದಲೇ ರಾಧೆ ಮಾ ಸುದ್ದಿಯಲ್ಲಿದ್ದರು. ರಾಧೆ ಮಾ ಸಹ ಕೆಂಪು ಬಣ್ಣದ ಸೀರೆ ಧರಿಸಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಯಾಮಿ ಸಹ ಕೆಂಪು ಬಣ್ಣದ ಸೀರೆ ಧರಿಸಿ, ಸಿಂಧೂರವಿಟ್ಟ ಫೋಟೋ ವೈರಲ್ ಆಗಿದೆ. ಇದನ್ನೂ ಓದಿ: ‘ದುಡ್ಡಿಗಾಗಿ ವಂಚನೆ’ – ಸೋನು ಸೂದ್ ವಿರುದ್ಧದ ಪೋಸ್ಟ್‌ಗೆ ಲೈಕ್ ಕೊಟ್ಟ ಕಂಗನಾ

Comments

Leave a Reply

Your email address will not be published. Required fields are marked *