ವಿಚಾರಣೆಗೆ ಕರೆ ತರಲಾಗಿದ್ದ ಕೈದಿ ನ್ಯಾಯಾಲಯದ 3ನೇ ಮಹಡಿಯಿಂದ ಜಂಪ್!

ತುಮಕೂರು: ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಿದ್ದ ಕೈದಿಯೊಬ್ಬ ಕೋರ್ಟ್ ನ 3ನೇ ಮಹಡಿಯಿಂದ ಜಿಗಿದು, ಅಸ್ವಸ್ಥಗೊಂಡ ಘಟನೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.

ಕೈದಿಯನ್ನು ಚಂದ್ರಯ್ಯ (29) ಎಂದು ಗುರುತಿಸಲಾಗಿದೆ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚೇಳೂರು ಪೊಲೀಸ್ ಠಾಣೆಯಲ್ಲಿ ಕೈದಿ ಚಂದ್ರಪ್ಪನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದರಿಂದ ತುಮಕೂರು ಕೇಂದ್ರ ಜೈಲಿನಲ್ಲಿ ಇರಿಸಲಾಗಿತ್ತು. ಜೈಲಿನಲ್ಲಿ ಚಂದ್ರಯ್ಯ ಮಾನಸಿಕವಾಗಿ ಕುಗ್ಗಿದ್ದ ಎನ್ನಲಾಗುತ್ತಿದೆ. ಆತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆರತರಲಾಗಿತ್ತು. ಕೋರ್ಟ್ ಕಟ್ಟಡದ ಮೂರನೇ ಮಹಡಿಗೆ ಹೋಗುತ್ತಿದ್ದಂತೆ ಕೆಳಗೆ ಹಾರಿದ್ದಾನೆ.

ತಕ್ಷಣವೇ ಕೈದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿ ಭೇಟಿ ನೀಡಿದ್ದಾರೆ.

Comments

Leave a Reply

Your email address will not be published. Required fields are marked *