ವೇತನ ಹೆಚ್ಚಳಕ್ಕೆ ಆಗ್ರಹ – ಮಳೆಯಲ್ಲೂ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಧಾರವಾಡ: ಜಿಲ್ಲೆಯಲ್ಲಿ ಇವತ್ತು ಆಶಾ ಕಾರ್ಯಕರ್ತೆರು ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರ ಎದುರು ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನೆಗೆ ಸರ್ಕಾರ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಇವತ್ತು ವಿವಿಧ ಗ್ರಾಮಗಳಲ್ಲಿ ಇರುವ ಪ್ರಾಥಮಿಕ ಆರೋಗ್ಯಗಳ ಮುಂದೆ ಪ್ರತಿಭಟನೆ ಮಾಡಿದರು.

ಜಿಲ್ಲೆಯ ಮುಗದ, ಉಪ್ಪಿನಬೇಟಗೇರಿ, ಅಮ್ಮಿನಬಾವಿ ಸೇರಿದಂತೆ ಹಲವು ಕಡೆಗಳಲ್ಲಿ ಇವರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಮೊದಲೇ ಸರ್ಕಾರಕ್ಕೆ 12 ಸಾವಿರ ವೇತನಕ್ಕೆ ಇವರು ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಇದಕ್ಕೆ ಸ್ಪಂದನೆ ಮಾಡಿಲ್ಲ. ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ಮಳೆ ಬರುತ್ತಿದ್ದು, ಈ ಮಳೆಯಲ್ಲಿಯೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿದ್ದು ಕಂಡು ಬಂತು.

Comments

Leave a Reply

Your email address will not be published. Required fields are marked *