ವ್ಯಕ್ತಿ ನೋಡಿ ನಾನು ಪ್ರಚಾರಕ್ಕೆ ಹೋಗೋದು: ದರ್ಶನ್

ಬೆಂಗಳೂರು: ಪಕ್ಷ ಹಾಗೂ ನಿರ್ಮಾಪಕರು ಎಂದಲ್ಲ, ವ್ಯಕ್ತಿ ನೋಡಿ ನಾನು ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಆರ್‍ಆರ್ ನಗರ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರು ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕ್ಷೇತ್ರದ ಜನತೆಗೆ ದಿನಸಿ ವಿತರಿಸುವ ಮೂಲಕ ಸಾಕಷ್ಟು ಸಹಾಯ ಮಾಡಿದ್ದಾರೆ. ಹೀಗಾಗಿ ಮಾನವೀಯತೆಯ ದೃಷ್ಟಿಯಿಂದ ನಾನು ಅವರ ಪರ ಪ್ರಚಾರಕ್ಕೆ ತೆರಳುತ್ತಿದೇನೆ ಎಂದರು.

ಮುನಿರತ್ನ ಬೆಂಬಲಿಸಲು ಅವರು ಮಾಡಿರುವ ಸಹಾಯವೇ ಸಾಕು. ಮಾನವೀಯತೆಯ ಆಧಾರದ ಮೇಲೆ ಅವರ ಪರ ಪ್ರಚಾರ ಮಾಡುತ್ತೇನೆ. ಮುನಿರತ್ನ ಕರೆದಲ್ಲಿಗೆ ಹೋಗಿ ಪ್ರಚಾರ ಮಾಡ್ತೀನಿ. ಅವರು ನನ್ನ ಅತ್ಯಂತ ಆಪ್ತರು. ಸಂಕಷ್ಟಕ್ಕೆ ನಿಂತವರ ಪರ ಪ್ರಚಾರಕ್ಕೆ ತೆರಳುತ್ತಿರುವುದಾಗಿ ಅವರು ಹೇಳಿದರು.

ರೋಡ್ ಶೋ ಜೊತೆಗೆ ಹಲವು ಕಡೆ ಸಾರಥಿ ಪ್ರಚಾರ ಭಾಷಣ ಸಹ ಮಾಡಲಿದ್ದಾರೆ. ಅಭಿಮಾನಿಗಳ ಬೇಡಿಕೆ ಮೇರೆಗೆ ತಮ್ಮ ಚಿತ್ರಗಳ ಫೇಮಸ್ ಡೈಲಾಗ್‍ಗಳನ್ನೂ ದರ್ಶನ್ ಹೇಳಿ ರಂಜಿಸಲಿದ್ದಾರೆ. ಇಡೀ ದಿನ ಮುನಿರತ್ನ ಪರ ಮತಯಾಚಿಸಲಿರುವ ದರ್ಶನ್ ಇಂದು ಕ್ಷೇತ್ರದಲ್ಲಿ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಲಿದ್ದಾರೆ.

Comments

Leave a Reply

Your email address will not be published. Required fields are marked *