ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.

ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ.

100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು ಕಚೇರಿಯನ್ನು ಒಡೆದು ಹಾಕಲು ಯತ್ನಿಸಿದ್ದಾರೆ. ಈ ವೇಳೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.

ಘಟನೆಯಲ್ಲಿ ಶಾಸಕರ ಮನೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಆಫೀಸ್ ಬಳಿ ನಿಂತಿದ್ದ ಕಾರುಗಳ ಮೇಲೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯನ್ನು ನೋಡಿ ಅಲ್ಲಿದ್ದ ಜನ ಓಡಿ ಹೋಗಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ.  ಪೊಲೀಸರು ಅಕ್ಕಪಕ್ಕದ ಎಲ್ಲಾ ರಸ್ತೆ ಗಳನ್ನು ಮುಚ್ಚಿದ್ದಾರೆ. ಪೊಲೀಸರ ಮೇಲೆ ಯುವಕರ ಗುಂಪು ದಾಳಿ ಮಾಡಿದೆ.

Comments

Leave a Reply

Your email address will not be published. Required fields are marked *