ಶಿಕ್ಷಕಿ ಮೇಲೆ ಬಿತ್ತು ವಿದ್ಯುತ್ ತಂತಿ – 20 ನಿಮಿಷದಲ್ಲಿ ಸುಟ್ಟು ಕರಕಲಾದ ಮಹಿಳೆ

– 11 ಕೆವಿ ಸಾಮರ್ಥ್ಯದ ವಿದ್ಯುತ್ ಲೈನ್

ಜೈಪುರ: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ 11 ಕೆವಿ ವಿದ್ಯುತ್ ತಂತಿ ಬದ್ದ ಘಟನೆ ರಾಜಸ್ಥಾನದ ಬಾಂಸ್ವಾಡ ಜಿಲ್ಲೆಯ ನೊಗ್ಮಾದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿ ಸಂಪೂರ್ಣ ಸುಟ್ಟ ಕರಕಲಾಗಿ ಸಾವನ್ನಪ್ಪಿದ್ದಾರೆ.

25 ವರ್ಷದ ನೀಲಂ ಸಾವನ್ನಪ್ಪಿದ ಶಿಕ್ಷಕಿ. ಗುರುವಾರ ಬೆಳಗ್ಗೆ ತಮ್ಮ ಸ್ಕೂಟಿಯಲ್ಲಿ ನೀಲಂ ಶಾಲೆಗೆ ತೆರಳುತ್ತಿದ್ದರು. ಬೆಳಗ್ಗೆ ಸುಮಾರು 10 ಗಂಟೆಗೆ ಪಾಟಿದಾರ್ ಸೇತುವೆ ದಾಟಿ ಹೋಗ್ತಿರುವಾಗ ವಿದ್ಯುತ್ ತಂತಿ ತುಂಡಾಗಿ ಶಿಕ್ಷಕಿ ಮೇಲೆ ಬಿದ್ದಿದೆ. ಘಟನೆಗೂ ಮುನ್ನ ಮಳೆಯಾಗಿತ್ತು. ರಸ್ತೆಯಲ್ಲಿ ನೀರು ನಿಂತಿದ್ದರಿಂದ ಭಯಗೊಂಡ ಸ್ಥಳೀಯರು ರಕ್ಷಣೆಗೆ ಹಿಂದೇಟು ಹಾಕಿದ್ದಾರೆ. ಆದ್ರೆ ವಿದ್ಯುತ್ ಇಲಾಖೆ ಸಹಾಯವಾಣಿ, ಸ್ಥಳೀಯ ಸಿಬ್ಬಂದಿ, ಪೊಲೀಸರು, ಅಂಬುಲೆನ್ಸ್ ಸಿಬ್ಬಂದಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.

ಸ್ಥಳೀಯರು ಫೋನ್ ಮಾಡಿ ವಿಷಯ ತಿಳಿಸಿದ್ರೂ ಸಿಬ್ಬಂದಿ 20 ನಿಮಿಷದ ಬಳಿಕ ವಿದ್ಯುತ್ ಕಡಿತಗೊಳಿಸಿದ್ದಾರೆ. ಫೋನ್ ಮಾಡಿದಾಗ ವಿದ್ಯುತ್ ಕಡಿತಗೊಳಿಸಿದ್ರೆ ಶಿಕ್ಷಕಿ ಬದುಕುತ್ತಿದ್ದರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಿದೋರ ನಿವಾಸಿಯಾಗಿದ್ದು ನೀಲಂ, ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಉದಯಪುದಲ್ಲಿ ಸರ್ಕಾರಿ ನೌಕರರಾಗಿದ್ದು, ದಂಪತಿಗೆ ಐದು ವರ್ಷದ ಮಗನಿದ್ದಾನೆ.

ಅರ್ಧಗಂಟೆಯ ಬಳಿಕ ಸ್ಥಳಕ್ಕಾಗಮಿಸಿದ ಅಂಬುಲೆನ್ಸ್ ಸಿಬ್ಬಂದಿ ಮಹಿಳೆ ಮೃತಪಟ್ಟಿರೋದನ್ನ ಖಚಿತ ಪಡಿಸಿದ್ದಾರೆ. ಆರು ತಿಂಗಳ ಹಿಂದೆ ಇದೇ ವಿದ್ಯುತ್ ತಂತಿ ತುಂಡಾಗಿ ಬಿದ್ದಿದರಿಂದ ಎರಡು ಹಸುಗಳು ಸಾವನ್ನಪ್ಪಿವೆ. ಈ ಘಟನೆಗೆ ವಿದ್ಯುತ್ ಇಲಾಖೆಯ ಬೇಜಾವಾಬ್ದಾರಿಯೇ ಕಾರಣ ಎಂದು ಶಿಕ್ಷಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

Comments

Leave a Reply

Your email address will not be published. Required fields are marked *