ಶಿರಾ ‘ಕೈ’ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು: ಬಿ.ಜೆ.ಪುಟ್ಟಸ್ವಾಮಿ

– ಬಿಜೆಪಿಯ ರಾಜೇಶ್ ಗೌಡ ಯುವ ಎತ್ತು
– ಶಿರಾದಲ್ಲಿ ಮರಿ ರಾಜಾಹುಲಿ ಪ್ರಚಾರ

ತುಮಕೂರು: ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿ ರಾಜೇಶ್ ಗೌಡ ಯುವ ಎತ್ತು ಎಂದು ರಾಜ್ಯ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪುಟ್ಟಸ್ವಾಮಿ, ಯುವ ಎತ್ತಿಗೆ ಶಿರಾ ಜನತೆ ಮತ ನೀಡಿದ್ರೆ ಪ್ರಯೋಜನೆ. ಏಳು ಬಾರಿ ಗೆದ್ದಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿಯಾಗಿರುವ ರಾಜೇಶ್ ಗೌಡ ಯುವಕರು. ಹಾಗಾಗಿ ಯುವ ಎತ್ತಿಗೆ ಮತ ನೀಡಿದ್ರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರ ವೈಯಕ್ತಿಕ ದ್ವೇಷದಿಂದಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾಯ್ತು. ಸರ್ಕಾರ ಬಿದ್ದು ಒಂದು ವರ್ಷ ಕಳೆದರೂ ಇಬ್ಬರ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಬಳಿ ಅಭಿವೃದ್ಧಿ ಮಂತ್ರ ಇಲ್ಲ. ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ಯಾಕೆ ಅಂತ ಗೊತ್ತಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಸಿಎಂ ಯಡಿಯೂರಪ್ಪ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೊರೊನಾ ವೇಳೆ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ ಇರದಿದ್ರೆ ಅಲ್ಲೋಲ ಕಲ್ಲೋಲವಾಗುತ್ತಿತ್ತು. ಸಿಎಂ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯತೆ ಮತ್ತು ಆರ್ಥಿಕ ನೆರವು ನೀಡಿದ್ದಾರೆ. ರಾಜಾಹುಲಿ ಯಡಿಯೂರಪ್ಪನವರ ಪುತ್ರ ಮರಿ ರಾಜಾಹುಲಿ ವಿಜಯೇಂದ್ರ ಶಿರಾದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ನಮ್ಮ ಅಭ್ಯರ್ಥಿಗೆ ಗೆದ್ದರೆ ಈ ಕ್ಷೇತ್ರ ಅಭಿವೃದ್ಧಿಯಾಗಲಿದ್ದು, ಬಿಜೆಪಿಗೆ ಮತ ನೀಡಿ ಎಂದು ಮತದಾರರ ಬಳಿ ಬಿ.ಜೆ.ಪುಟ್ಟಸ್ವಾಮಿ ಮನವಿ ಮಾಡಿಕೊಂಡರು.

Comments

Leave a Reply

Your email address will not be published. Required fields are marked *