ಶೀಘ್ರವೇ ಗುಣಮುಖರಾಗುವಂತೆ ಡಿಕೆಶಿಗೆ ಬಿಎಸ್‍ವೈ ಹಾರೈಕೆ

ಬೆಂಗಳೂರು: ಕೊರೊನಾ ಪಾಸಿಟಿವ್ ದೃಢಪಟ್ಟು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಇಂದು ಬೆಳಗ್ಗೆ ದೂರವಾಣಿ ಮೂಲಕ ಡಿಕೆಶಿ ಆರೋಗ್ಯ ವಿಚಾರಿಸಿದ ಸಿಎಂ, ಶೀಘ್ರವೇ ಗುಣಮುಖರಾಗುವಂತೆ ತಿಳಿಸಿದ್ದಾರೆ. ಅಲ್ಲದೆ ಆದಷ್ಟು ಬೇಗ ಚೇತರಿಸಿಕೊಂಡು ಮರಳುವಂತೆ ಸಿಎಂ ಡಿಕೆಶಿಗೆ ಹಾರೈಸಿದ್ದಾರೆ.

ನಿನ್ನೆ ಟ್ವೀಟ್ ಮಾಡಿದ್ದ ಡಿಕೆಶಿ, ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಕೊರೊನಾ ಟೆಸ್ಟ್ ಮಾಡಿದ ವೇಳೆ ವರದಿ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯವಾಗಿದ್ದೇನೆ. ನಿಮ್ಮೆಲ್ಲರ ಆಶೀವಾದದಿಂದ ಶೀಘ್ರವೇ ಗುಣಮುಖವಾಗಿ ಬರುತ್ತೇನೆ. ಅಲ್ಲದೆ ಕೆಲ ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *