ಸಕಲೇಶಪುರ ಪಟ್ಟಣದ ಮೂರು ಕಡೆ ನಿಷೇಧಾಜ್ಞೆ ಜಾರಿ

ಹಾಸನ: ಗೋಹತ್ಯೆ ಹಾಗೂ ಗೋ ಮಾಂಸ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ವಿಹೆಚ್‍ಪಿ, ಬಜರಂಗದಳದ ಕಾರ್ಯಕರ್ತರಿಂದ ಪ್ರತಿಭಟನೆ ಹಿನ್ನಲೆಯಲ್ಲಿ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಸಕಲೇಶಪುರ ಪಟ್ಟಣದ ಮೂರು ಕಡೆ ನಿಷೇಧಾಜ್ಞೆ ಜಾರಿಯಾಗಿದೆ.

ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಸಂಘಟನೆಯಿಂದ ಕುಶಾಲನಗರ ಚಲೋ ಪ್ರತಿಭಟನೆ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಗಿರೀಶ್ ಆರ್.ನಂದನ್ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಪ್ರಕಟಿಸಿದ್ದಾರೆ. ಹೀಗಾಗಿ ಸಕಲೇಶಪುರ ಪಟ್ಟಣದ ಕುಶಾಲನಗರ, ಪ್ರೇಮನಗರ ಹಾಗೂ ಅಜಾದ್ ರಸ್ತೆಯಲ್ಲಿ ಇಂದು ನಿಷೇಧಾಜ್ಞೆ ಜಾರಿಯಾಗಿದೆ.

ಸಕಲೇಶಪುರದಲ್ಲಿ ಗೋ ಹತ್ಯೆ ನಡೆಸಿ ಚರಂಡಿಗಳಲ್ಲಿ ರಕ್ತ, ತ್ಯಾಜ್ಯ ಹರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡುವಂತೆ ಮನವಿ ಮಾಡಲಾಗಿತ್ತು.

ಜಿಲ್ಲಾಡಳಿತ ಪ್ರತಿಭಟನೆಗೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

Comments

Leave a Reply

Your email address will not be published. Required fields are marked *