ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಪಾಸಿಟಿವ್

ಬಳ್ಳಾರಿ: ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಸೋಂಕು ದೃಢವಾಗಿದೆ.

ಸಚಿವ ಆನಂದ್ ಸಿಂಗ್ ಶುಕ್ರವಾರ ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಅದರ ವರದಿ ಶನಿವಾರ ರಾತ್ರಿ ಬಂದಿದ್ದು, ವರದಿಯಲ್ಲಿ ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಯಾವುದೇ ರೋಗ ಲಕ್ಷಣಗಳಿಲ್ಲದೇ ಆನಂದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಎ ಸಿಂಪ್ಟಮ್ಯಾಟಿಕ್ ಕೇಸ್ ಆಗಿರುವುದರಿಂದ ಆನಂದ್ ಸಿಂಗ್ ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಹೊಸಪೇಟೆ ನಿವಾಸದಲ್ಲಿ ಆನಂದ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಆರೋಗ್ಯವಾಗಿದ್ದಾರೆ, ಪಾಸಿಟಿವ್ ಬಂದಿರುವುದು ನಿಜ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಆನಂದ್ ಸಿಂಗ್ ಕೊರೊನಾ ಸೋಂಕಿತರ ವಾರ್ಡ್ ಒಳಗೆ ಹೋಗಿ ಬಂದಿದ್ದರು. ಅಲ್ಲದೇ ಅವರ ಕಾರು ಚಾಲಕನಿಗೂ ಕೊರೊನಾ ದೃಢವಾಗಿತ್ತು. ಇದರಿಂದ ಆನಂದ್ ಸಿಂಗ್‍ಗೂ ಕೊರೊನಾ ಬಂದಿದೆ ಎಂದು ಹೇಳಾಗುತ್ತಿದೆ.

Comments

Leave a Reply

Your email address will not be published. Required fields are marked *