ಸಚಿವ ಶ್ರೀಮಂತ ಪಾಟೀಲ್‍ಗೆ ಕೊರೊನಾ ಪಾಸಿಟಿವ್

ಚಿಕ್ಕೋಡಿ(ಬೆಳಗಾವಿ): ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಪುಟದ ಮತ್ತೊರ್ವ ಸಚಿವ ಕೊರೊನಾ ಸೋಂಕಿಗೆ ಸಿಲುಕಿದ್ದಾರೆ.

ಕೊರೊನಾ ಪರೀಕ್ಷೆಯಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕ, ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್‍ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂದು ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಅಶ್ವಥ್ ನಾರಾಯಣ್ ಸೇರಿದಂತೆ ಅನೇಕ ರಾಜಕೀಯ ಮುಖಂಡರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು, ಅವರೆಲ್ಲ ಗುಣಮುಖರಾಗಿದ್ದಾರೆ.

Comments

Leave a Reply

Your email address will not be published. Required fields are marked *